ಚಿಕ್ಕಮಗಳೂರು: ‘ವಿಧಾನ ಪರಿಷತ್ ಚುನಾವಣೆಯಲ್ಲಿಜೆಡಿಎಸ್ ಸ್ಪರ್ಧಿಸದ ಕಡೆ, ಬಿಜೆಪಿಗೆ ಬೆಂಬಲ ನೀಡುವಂತೆ ಕೇಳಿದ್ದೇವೆ. ಆ ಪಕ್ಷದ ವರಿಷ್ಠರು ನಿರ್ಧಾರವನ್ನು ಸ್ಥಳೀಯ ಮುಖಂಡರ ವಿವೇಚನೆಗೆ ಬಿಟ್ಟಿದ್ದಾರೆ, ಜೆಡಿಎಸ್ನೊಂದಿಗೆ ಒಳ ಒಪ್ಪಂದ ಮಾಡಿಕೊಂಡಿಲ್ಲ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯಿಸಿದರು.