<p><strong>ಚಿಕ್ಕಮಗಳೂರು</strong>: ‘ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಕಲಿಮಾ ತಯ್ಯಿಬಾ ಜಿಯಾರತ್(ದರ್ಶನ) ಸಂಪೂರ್ಣ ಶಾಂತಿಯುತವಾಗಿ ನಡೆಸಲಾಗಿದೆ. ಯಾವುದೇ ಹೊಸ ಧಾರ್ಮಿಕ ವಿಧಿ ಅಥವಾ ಆಚರಣೆ ನಡೆಸಿಲ್ಲ’ ಎಂದು ಬಾಬಾಬುಡನ್ ವಂಶಸ್ಥ ಸೈಯ್ಯದ್ ಫಕ್ರುದ್ದೀನ್ ಶಾ ಖಾದ್ರಿ ಸ್ಪಷ್ಟಪಡಿಸಿದ್ದಾರೆ.</p>.<p>ದೀರ್ಘಕಾಲದಿಂದ ನಡೆದುಕೊಂಡು ಬಂದಿರುವ ಧಾರ್ಮಿಕ ಆಚರಣೆಗಳನ್ನಷ್ಟೇ ಜ.23ರಂದು ನಡೆಸಲಾಗಿದೆ. ಈ ಸಂಬಂಧ ವಿಶ್ವ ಹಿಂದೂ ಪರಿಷತ್ ಮುಖಂಡರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಬೆಳ್ಳಿ ಬಾಗಿಲಿನ ಬಳಿ ಇರುವ ಕಲಿಮಾ ತಯ್ಯಿಬಾ ಹೊಸದಾಗಿ ನಿರ್ಮಿಸಿರುವುದಲ್ಲ. ಅದು ಐತಿಹಾಸಿಕವಾಗಿ ಅಸ್ತಿತ್ವದಲ್ಲಿರುವ ಕುರುಹು. ಇದರ ದರ್ಶನ ಹಿಂದಿನ ದಿನಗಳಿಂದಲೂ ನಡೆದುಕೊಂಡು ಬಂದಿದೆ ಎಂದು ಹೇಳಿದ್ದಾರೆ.</p>.<p>‘ಕಾನೂನಿಗೆ ಪೂರ್ಣ ಗೌರವ ಕೊಟ್ಟು ಈ ಆಚರಣೆ ಕೈಗೊಳ್ಳಲಾಗಿದೆ. ಮೊದಲೇ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಪೂರ್ವಜರ ಸಮಾಧಿಗಳಿಗೆ ಹೋಗುವ ಪ್ರವೇಶದ್ವಾರ ಮುಚ್ಚಿದ್ದರಿಂದ ಫಾತಿಹಾ ಸಲ್ಲಿಸಲು ಸಾಧ್ಯವಾಗಿಲ್ಲ. ಇದರಿಂದ ನಮ್ಮ ಧಾರ್ಮಿಕ ಭಾವನೆಗಳಿಗೂ ನೋವುಂಟಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಕಲಿಮಾ ತಯ್ಯಿಬಾ ಜಿಯಾರತ್(ದರ್ಶನ) ಸಂಪೂರ್ಣ ಶಾಂತಿಯುತವಾಗಿ ನಡೆಸಲಾಗಿದೆ. ಯಾವುದೇ ಹೊಸ ಧಾರ್ಮಿಕ ವಿಧಿ ಅಥವಾ ಆಚರಣೆ ನಡೆಸಿಲ್ಲ’ ಎಂದು ಬಾಬಾಬುಡನ್ ವಂಶಸ್ಥ ಸೈಯ್ಯದ್ ಫಕ್ರುದ್ದೀನ್ ಶಾ ಖಾದ್ರಿ ಸ್ಪಷ್ಟಪಡಿಸಿದ್ದಾರೆ.</p>.<p>ದೀರ್ಘಕಾಲದಿಂದ ನಡೆದುಕೊಂಡು ಬಂದಿರುವ ಧಾರ್ಮಿಕ ಆಚರಣೆಗಳನ್ನಷ್ಟೇ ಜ.23ರಂದು ನಡೆಸಲಾಗಿದೆ. ಈ ಸಂಬಂಧ ವಿಶ್ವ ಹಿಂದೂ ಪರಿಷತ್ ಮುಖಂಡರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಬೆಳ್ಳಿ ಬಾಗಿಲಿನ ಬಳಿ ಇರುವ ಕಲಿಮಾ ತಯ್ಯಿಬಾ ಹೊಸದಾಗಿ ನಿರ್ಮಿಸಿರುವುದಲ್ಲ. ಅದು ಐತಿಹಾಸಿಕವಾಗಿ ಅಸ್ತಿತ್ವದಲ್ಲಿರುವ ಕುರುಹು. ಇದರ ದರ್ಶನ ಹಿಂದಿನ ದಿನಗಳಿಂದಲೂ ನಡೆದುಕೊಂಡು ಬಂದಿದೆ ಎಂದು ಹೇಳಿದ್ದಾರೆ.</p>.<p>‘ಕಾನೂನಿಗೆ ಪೂರ್ಣ ಗೌರವ ಕೊಟ್ಟು ಈ ಆಚರಣೆ ಕೈಗೊಳ್ಳಲಾಗಿದೆ. ಮೊದಲೇ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಪೂರ್ವಜರ ಸಮಾಧಿಗಳಿಗೆ ಹೋಗುವ ಪ್ರವೇಶದ್ವಾರ ಮುಚ್ಚಿದ್ದರಿಂದ ಫಾತಿಹಾ ಸಲ್ಲಿಸಲು ಸಾಧ್ಯವಾಗಿಲ್ಲ. ಇದರಿಂದ ನಮ್ಮ ಧಾರ್ಮಿಕ ಭಾವನೆಗಳಿಗೂ ನೋವುಂಟಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>