ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ ರೈಲು ದುರಂತ: ಕಳಸದ 110 ಜನ ಸುರಕ್ಷಿತ

Published 3 ಜೂನ್ 2023, 7:39 IST
Last Updated 3 ಜೂನ್ 2023, 7:39 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಒಡಿಶಾದಲ್ಲಿ ಅಪಘಾತಕ್ಜೀಡಾಗಿರುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕಳಸ ತಾಲ್ಲೂಕಿನ 110 ಜನ ಸುರಕ್ಷಿತವಾಗಿದ್ದಾರೆ.

ಕಳಸ ತಾಲ್ಲೂಕಿನ ವಿವಿಧ ಗ್ರಾಮಗಳ 110 ಜನ ಉತ್ತರ ಭಾರತ ತೀರ್ಥ ಕ್ಷೇತ್ರಗಳ ದರ್ಶನಕ್ಕೆ ಹೋಗಿದ್ದರು. ಬೆಂಗಳೂರಿನಿಂದ ಗುರುವಾರ ಪ್ರಯಾಣ ಆರಂಭಿಸಿದ್ದರು.

'110 ಜನರೂ ಒಟ್ಟಿಗೆ ಪ್ರಯಾಣಿಸಿದ್ದು, ಅವರೊಂದಿಗೆ ಸಂಪರ್ಕ ಸಾಧಿಸಲಾಗಿದೆ‌. ಸುರಕ್ಷಿತವಾಗಿ ಇದ್ದೇವೆ ಎಂದು ತಿಳಿಸಿದ್ದಾರೆ' ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ ಬಿ.ಆರ್. 'ಪ್ರಜಾವಾಣಿ'ಗೆ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT