<p><strong>ಚಿಕ್ಕಮಗಳೂರು:</strong> ಉದ್ಯಮಿ ಒಕ್ಕಲಿಗ ಸಂಘಟನೆಯ ರಾಜ್ಯ ಘಟಕದಿಂದ ಜ.9, 10 ಮತ್ತು 11ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಎಕ್ಸ್ಪೊ–2026’ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಜಿಲ್ಲಾ ಸಮಿತಿ ಅಧ್ಯಕ್ಷ ಜೆ.ಪಿ.ಕೃಷ್ಣೇಗೌಡ ತಿಳಿಸಿದರು.</p>.<p>ಒಕ್ಕಲಿಗರು ಕೇವಲ ಗ್ರಾಹಕರಾಗಿ ಉಳಿಯದೆ ಉತ್ಪಾದಕರು ಮತ್ತು ಮಾರಾಟಗಾರರನ್ನಾಗಿ ಬೆಳೆಸುವುದು ಹಾಗೂ ಸಮುದಾಯದ ಯುವ ಜನರಲ್ಲಿ ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶ. ನವೋದ್ಯಮದಲ್ಲಿ ತೊಡಗಿಸಲು ಈ ಎಕ್ಸ್ಪೊ ಅನುಕೂಲವಾಗಲಿದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಕೃಷಿ, ಆರೋಗ್ಯ, ಶಿಕ್ಷಣ ಸೇರಿ ಔದ್ಯಮಿಕ ಕ್ಷೇತ್ರದ 11 ವಲಯಗಳಲ್ಲಿ ಅವಕಾಶಗಳನ್ನು ಗುರುತಿಸಲಾಗುವುದು. ಮೂರು ದಿನಗಳ ಮೇಳದಲ್ಲಿ ಒಕ್ಕಲಿಗ ಉದ್ಯಮಿಗಳು ತಮ್ಮ ಉತ್ಪನ್ನ ಹಾಗೂ ಸೇವೆಗಳನ್ನು ಪ್ರದರ್ಶನ ಮಾಡಲಿದ್ದಾರೆ ಎಂದು ತಿಳಿಸಿದರು.</p>.<p>ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಯಶಸ್ವಿ ಉದ್ದಿಮೆದಾರರೊಂದಿಗೆ ಯುವ ಜನರನ್ನು ಪರಸ್ಪರ ಸಹಕಾರದೊಂದಿಗೆ ಉದ್ದಿಮೆಯತ್ತ ಸೆಳೆಯವುದು ಮತ್ತು ಮಾಹಿತಿ ಹಂಚಿಕೊಳ್ಳುವ ಪ್ರಕ್ರಿಯೆಯಾಗಿದೆ. ಜಿಲ್ಲೆಯ ಎಲ್ಲಾ ಒಕ್ಕಲಿಗ ಬಂಧುಗಳು ಎಕ್ಸ್ಪೊದಲ್ಲಿ ಭಾಗವಹಿಸಬೇಕು ಎಂದು ಕೋರಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಉದ್ಯಮಿ ಒಕ್ಕಲಿಗ ಜಿಲ್ಲಾ ಸಮಿತಿಯ ವರ್ಷ, ಮಹೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಉದ್ಯಮಿ ಒಕ್ಕಲಿಗ ಸಂಘಟನೆಯ ರಾಜ್ಯ ಘಟಕದಿಂದ ಜ.9, 10 ಮತ್ತು 11ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಎಕ್ಸ್ಪೊ–2026’ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಜಿಲ್ಲಾ ಸಮಿತಿ ಅಧ್ಯಕ್ಷ ಜೆ.ಪಿ.ಕೃಷ್ಣೇಗೌಡ ತಿಳಿಸಿದರು.</p>.<p>ಒಕ್ಕಲಿಗರು ಕೇವಲ ಗ್ರಾಹಕರಾಗಿ ಉಳಿಯದೆ ಉತ್ಪಾದಕರು ಮತ್ತು ಮಾರಾಟಗಾರರನ್ನಾಗಿ ಬೆಳೆಸುವುದು ಹಾಗೂ ಸಮುದಾಯದ ಯುವ ಜನರಲ್ಲಿ ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶ. ನವೋದ್ಯಮದಲ್ಲಿ ತೊಡಗಿಸಲು ಈ ಎಕ್ಸ್ಪೊ ಅನುಕೂಲವಾಗಲಿದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಕೃಷಿ, ಆರೋಗ್ಯ, ಶಿಕ್ಷಣ ಸೇರಿ ಔದ್ಯಮಿಕ ಕ್ಷೇತ್ರದ 11 ವಲಯಗಳಲ್ಲಿ ಅವಕಾಶಗಳನ್ನು ಗುರುತಿಸಲಾಗುವುದು. ಮೂರು ದಿನಗಳ ಮೇಳದಲ್ಲಿ ಒಕ್ಕಲಿಗ ಉದ್ಯಮಿಗಳು ತಮ್ಮ ಉತ್ಪನ್ನ ಹಾಗೂ ಸೇವೆಗಳನ್ನು ಪ್ರದರ್ಶನ ಮಾಡಲಿದ್ದಾರೆ ಎಂದು ತಿಳಿಸಿದರು.</p>.<p>ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಯಶಸ್ವಿ ಉದ್ದಿಮೆದಾರರೊಂದಿಗೆ ಯುವ ಜನರನ್ನು ಪರಸ್ಪರ ಸಹಕಾರದೊಂದಿಗೆ ಉದ್ದಿಮೆಯತ್ತ ಸೆಳೆಯವುದು ಮತ್ತು ಮಾಹಿತಿ ಹಂಚಿಕೊಳ್ಳುವ ಪ್ರಕ್ರಿಯೆಯಾಗಿದೆ. ಜಿಲ್ಲೆಯ ಎಲ್ಲಾ ಒಕ್ಕಲಿಗ ಬಂಧುಗಳು ಎಕ್ಸ್ಪೊದಲ್ಲಿ ಭಾಗವಹಿಸಬೇಕು ಎಂದು ಕೋರಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಉದ್ಯಮಿ ಒಕ್ಕಲಿಗ ಜಿಲ್ಲಾ ಸಮಿತಿಯ ವರ್ಷ, ಮಹೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>