‘ದಾಖಲಾತಿ, ಪಿಂಚಣಿ ಇತ್ಯಾದಿ ನಿಟ್ಟಿನಲ್ಲಿ ಜನರು ಕಚೇರಿಗಳಿಗೆ ಜನರು ಅಲೆಯುವುದನ್ನು ತಪ್ಪಿಸಲು ಅಧಿಕಾರಿಗಳೇ ಹಳ್ಳಿಗಳಿಗೆ ತೆರಳುವಂತೆ ಕ್ರಮ ವಹಿಸಿದ್ದೇವೆ. ಜಿಲ್ಲಾಧಿಕಾರಿ ಜತೆಗೆ ಉಪವಿಭಾಗಾಧಿಕಾರಿ, ತಹಶೀಲ್ದಾರ್, ಭೂದಾಖಲೆ ಉಪನಿರ್ದೇಶಕ ಇತರರರು ಹಳ್ಳಿಗಳಿಗೆ ತೆರಳಬೇಕು. ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಅಲ್ಲಿ ಕಾರ್ಯನಿರ್ವಹಿಸಬೇಕು. ಜಿಲ್ಲಾಧಿಕಾರಿ ಸಾಧ್ಯವಾದರೆ ಆ ದಿನ ಗ್ರಾಮದಲ್ಲೇ ವಾಸ್ತವ್ಯ ಹೂಡಬಹುದು’ ಎಂದರು.