‘ಕಾಡುಹಂದಿಗಳು ಸರಣಿಯಾಗಿ ಸಾವಿಗೀಡಾಗುತ್ತಿವೆ. ಅರಣ್ಯದ ಇತರೆಡೆಗಳಲ್ಲಿ ಹಂದಿಗಳು ಮೃತಪಟ್ಟಿವೆಯೇ ಎಂಬ ನಿಟ್ಟಿನಲ್ಲಿಯೂ ಗಮನ ಹರಿಸಬೇಕು. ಹಂದಿಗಳ ಸಾವಿಗೆ ಕಾರಣ ಪತ್ತೆ ನಿಟ್ಟಿನಲ್ಲಿ ಸಂಬಂಧಪಟ್ಟವರು ಕಾರ್ಯ ಪ್ರವೃತ್ತರಾಗಬೇಕು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಅಗತ್ಯ ಎಚ್ಚರ ವಹಿಸಬೇಕು ಮತ್ತು ಆದ್ಯ ಗಮನ ಹರಿಸಬೇಕು’ ಎಂದು ಪರಿಸರಾಸಕ್ತರು ಒತ್ತಾಯಿಸಿದ್ದಾರೆ.