ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲಿ ಹಗಲುಗನಸು ಕಾಣಲು ನಿಷೇಧ ಇಲ್ಲ

ಪ್ರಧಾನಿ ಹುದ್ದೆ: ರಾಹುಲ್‌ ಲೇವಡಿ ಮಾಡಿದ ಜಾವಡೇಕರ್‌
Last Updated 22 ಮೇ 2018, 19:34 IST
ಅಕ್ಷರ ಗಾತ್ರ

ಮುಂಬೈ: ‘ಭಾರತದಲ್ಲಿ ಹಗಲುಗನಸು ಕಾಣಲು ಯಾವುದೇ ರೀತಿಯ ನಿಷೇಧ ಇಲ್ಲ’ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಅವರು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಪ್ರಧಾನಿಯಾಗುವ ಇಂಗಿತವನ್ನು ಲೇವಡಿ ಮಾಡಿದ್ದಾರೆ.

‘ಈಗಾಗಲೇ 20 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್‌ ಬೆರಳೆಣಿಕೆಯ ರಾಜ್ಯಗಳಲ್ಲಿ ಮಾತ್ರ ಅಧಿಕಾರದಲ್ಲಿದೆ. ಈ ವಾಸ್ತವ ಗೊತ್ತಿದ್ದರೂ ರಾಹುಲ್‌ ಗಾಂಧಿ ಪ್ರಧಾನಿಯಾಗುವ ಕನಸು ಕಾಣುತ್ತಿದ್ದಾರೆ’ ಎಂದು ಅವರು ಕುಹಕವಾಡಿದ್ದಾರೆ.

‘ರಾಜಕೀಯ ಎಂದರೆ ಆಕರ್ಷಕ ಟ್ವೀಟ್ ಅಥವಾ ಭಾಷಣ ಮಾಡಿದಷ್ಟು ಸುಲಭವಲ್ಲ. ಅದರ ವ್ಯಾಪ್ತಿ ಅದಕ್ಕೂ ಮಿಗಿಲಾದದ್ದು’ ಎಂದು ಜಾವಡೇಕರ್‌ ಮಂಗಳವಾರ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ವಿಶ್ಲೇಷಿಸಿದ್ದಾರೆ.

‘ಕರ್ನಾಟಕದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿಯನ್ನು ಸರ್ಕಾರ ರಚಿಸಲು ಆಹ್ವಾನಿಸಿದ  ರಾಜ್ಯಪಾಲ ವಜುಭಾಯಿ ವಾಲಾ ಅವರ ಕ್ರಮ ಸಂವಿಧಾನಬದ್ಧವಾಗಿದೆ’ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT