<p><strong>ಕಳಸ</strong>: ಇಲ್ಲಿನ ಕೆಪಿಎಸ್ ಶಾಲಾ ಮೈದಾನವನ್ನೇ ₹2 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿ, ತಾಲ್ಲೂಕು ಕ್ರೀಡಾಂಗಣವಾಗಿ ನಿರ್ಮಿಸುವ ಪ್ರಸ್ತಾಪಕ್ಕೆ ಭಾರತ ಕಮ್ಯುನಿಸ್ಟ್ ಪಕ್ಷದ ಮುಖಂಡ ಕೆಳಗೂರು ರಮೇಶ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>ಈ ಕುರಿತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜು. 8ರಂದು ಕಳಸ ಕೆಪಿಎಸ್ ಶಾಲಾಭಿವೃದ್ಧಿ ಸಮಿತಿ ಸಭೆಯನ್ನು ಕರೆದಿದೆ. ಆದರೆ, ಹೊಸದಾಗಿ 5 ಎಕರೆ ಭೂಮಿಯಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವ ಬದಲು ಶಾಲೆಯ ಸಣ್ಣ ಮೈದಾನವನ್ನೇ ತಾಲ್ಲೂಕು ಕ್ರೀಡಾಂಗಣ ಮಾಡುವ ಹಿಂದೆ ಹುನ್ನಾರ ಇದೆ ಎಂದು ಅವರು ಆರೋಪಿಸಿದ್ದಾರೆ.</p>.<p>ಕಳಸದ ಸರ್ವೆ ನಂ.641ರಲ್ಲಿ ನೆಲ್ಲಿಕೆರೆ ಬಳಿ 30 ಎಕರೆ ಕಂದಾಯ ಭೂಮಿ ಲಭ್ಯವಿದೆ. ಇದರಲ್ಲಿ 5 ಎಕರೆ ಕ್ರೀಡಾಂಗಣಕ್ಕೆ ಮತ್ತು 2 ಎಕರೆ ತಾಲ್ಲೂಕು ಆಸ್ಪತ್ರೆಗೆ ಕೂಡಲೇ ಕಂದಾಯ ಇಲಾಖೆ ಮಂಜೂರು ಮಾಡಬೇಕು. ಭೂಮಿ ಒತ್ತುವರಿ ಆಗಿದ್ದರೂ ತೆರವು ಮಾಡಿ ಕೊಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಆದೇಶಿಸಿದ್ದಾರೆ ಎಂದು ರಮೇಶ್ ತಿಳಿಸಿದ್ದಾರೆ.</p>.<p>ಈಗಿನ ಕೆಪಿಎಸ್ ಮೈದಾನದಲ್ಲಿ ತಾಲ್ಲೂಕು ಕ್ರೀಡಾಂಗಣ ಮಾಡಿದರೆ ಒಂದು ಸುತ್ತಿನಲ್ಲಿ 400 ಮೀಟರ್ ಟ್ರ್ಯಾಕ್ ಸಿಗದೆ ಕ್ರೀಡಾಪಟುಗಳಿಗೆ ಅನ್ಯಾಯ ಆಗುತ್ತದೆ. ಜೊತೆಗೆ ಶಾಲೆಯ ಪಕ್ಕದಲ್ಲೇ ತಾಲ್ಲೂಕು ಕ್ರೀಡಾಂಗಣ ಮಾಡುವುದರಿಂದ ಭವಿಷ್ಯದಲ್ಲಿ ಪಾಠ ಪ್ರವಚನಕ್ಕೆ ಅಡ್ಡಿ ಆಗುತ್ತದೆ ಎಂದು ಅವರು ಗಮನ ಸೆಳೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಳಸ</strong>: ಇಲ್ಲಿನ ಕೆಪಿಎಸ್ ಶಾಲಾ ಮೈದಾನವನ್ನೇ ₹2 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿ, ತಾಲ್ಲೂಕು ಕ್ರೀಡಾಂಗಣವಾಗಿ ನಿರ್ಮಿಸುವ ಪ್ರಸ್ತಾಪಕ್ಕೆ ಭಾರತ ಕಮ್ಯುನಿಸ್ಟ್ ಪಕ್ಷದ ಮುಖಂಡ ಕೆಳಗೂರು ರಮೇಶ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>ಈ ಕುರಿತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜು. 8ರಂದು ಕಳಸ ಕೆಪಿಎಸ್ ಶಾಲಾಭಿವೃದ್ಧಿ ಸಮಿತಿ ಸಭೆಯನ್ನು ಕರೆದಿದೆ. ಆದರೆ, ಹೊಸದಾಗಿ 5 ಎಕರೆ ಭೂಮಿಯಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವ ಬದಲು ಶಾಲೆಯ ಸಣ್ಣ ಮೈದಾನವನ್ನೇ ತಾಲ್ಲೂಕು ಕ್ರೀಡಾಂಗಣ ಮಾಡುವ ಹಿಂದೆ ಹುನ್ನಾರ ಇದೆ ಎಂದು ಅವರು ಆರೋಪಿಸಿದ್ದಾರೆ.</p>.<p>ಕಳಸದ ಸರ್ವೆ ನಂ.641ರಲ್ಲಿ ನೆಲ್ಲಿಕೆರೆ ಬಳಿ 30 ಎಕರೆ ಕಂದಾಯ ಭೂಮಿ ಲಭ್ಯವಿದೆ. ಇದರಲ್ಲಿ 5 ಎಕರೆ ಕ್ರೀಡಾಂಗಣಕ್ಕೆ ಮತ್ತು 2 ಎಕರೆ ತಾಲ್ಲೂಕು ಆಸ್ಪತ್ರೆಗೆ ಕೂಡಲೇ ಕಂದಾಯ ಇಲಾಖೆ ಮಂಜೂರು ಮಾಡಬೇಕು. ಭೂಮಿ ಒತ್ತುವರಿ ಆಗಿದ್ದರೂ ತೆರವು ಮಾಡಿ ಕೊಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಆದೇಶಿಸಿದ್ದಾರೆ ಎಂದು ರಮೇಶ್ ತಿಳಿಸಿದ್ದಾರೆ.</p>.<p>ಈಗಿನ ಕೆಪಿಎಸ್ ಮೈದಾನದಲ್ಲಿ ತಾಲ್ಲೂಕು ಕ್ರೀಡಾಂಗಣ ಮಾಡಿದರೆ ಒಂದು ಸುತ್ತಿನಲ್ಲಿ 400 ಮೀಟರ್ ಟ್ರ್ಯಾಕ್ ಸಿಗದೆ ಕ್ರೀಡಾಪಟುಗಳಿಗೆ ಅನ್ಯಾಯ ಆಗುತ್ತದೆ. ಜೊತೆಗೆ ಶಾಲೆಯ ಪಕ್ಕದಲ್ಲೇ ತಾಲ್ಲೂಕು ಕ್ರೀಡಾಂಗಣ ಮಾಡುವುದರಿಂದ ಭವಿಷ್ಯದಲ್ಲಿ ಪಾಠ ಪ್ರವಚನಕ್ಕೆ ಅಡ್ಡಿ ಆಗುತ್ತದೆ ಎಂದು ಅವರು ಗಮನ ಸೆಳೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>