<p><strong>ಚಿಕ್ಕಮಗಳೂರು</strong>: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಆಮ್ಲಜನಕ ವ್ಯವಸ್ಥೆಯ ಕೆಎಸ್ಆರ್ಟಿಸಿ ಬಸ್ಗೆ(ಆಕ್ಸಿಜನ್ ಆನ್ ವೀಲ್ಸ್) ಸೋಮವಾರ ಚಾಲನೆ ನೀಡಿದರು.</p>.<p>ನಾಯೋನಿಕ ಐ ಕೇರ್ ಟ್ರಸ್ಟ್, ಸಿಟ್ರಿಕ್ ಇಂಡಿಯಾ, ಜಿಲ್ಲಾಡಳಿತದ ಸಹಯೋಗದಲ್ಲಿ ಆಮ್ಲಜನಕ ವ್ಯವಸ್ಥೆಯ ಬಸ್ ಸಜ್ಜುಗೊಳಿಸಲಾಗಿದೆ. ಜಿಲ್ಲಾಸ್ಪತ್ರೆ ಆವರಣದಲ್ಲಿ ಈ ಬಸ್ ಇರಲಿದೆ.</p>.<p>ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚು ಇದೆ. ಆಸ್ಪತ್ರೆಗೆ ಕರೆತಂದ ಹೊಸ ರೋಗಿಗಳಿಗೆ ಆಮ್ಲಜನಕ ತುರ್ತಾಗಿ ಒದಗಿಸಬೇಕಿದ್ದರೆ, ವಿಳಂಬವಾಗುವುದನ್ನು ತಪಿಸುವ ನಿಟ್ಟಿನಲ್ಲಿ ಬಸ್ನಲ್ಲಿ ವ್ಯವಸ್ಥೆ ಮಾಡಲಾಗಿದೆ.</p>.<p>‘ಬಸ್ನಲ್ಲಿ ಆಮ್ಲಜನಕ ಕಾನ್ಸಂಟ್ರೆಟರ್ ಅಳವಡಿಸಿದ್ದಾರೆ. ಐವರಿಗೆ ಆಮ್ಲಜನಕ ಕಲ್ಪಿಸಲು ಬಸ್ನಲ್ಲಿ ವ್ಯವಸ್ಥೆ ಇದೆ’ ಎಂದು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಮೋಹನ್ ಕುಮಾರ್ ತಿಳಿಸಿದರು.</p>.<p>‘ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ನಲ್ಲಿ ಆಮ್ಲಜನಕ ವ್ಯವಸ್ಥೆ ಕಲ್ಪಿಸಲಾಗಿದೆ. ಈ ವ್ಯವಸ್ಥೆ ಯಶಸ್ವಿಯಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಆಮ್ಲಜನಕ ವ್ಯವಸ್ಥೆಯ ಕೆಎಸ್ಆರ್ಟಿಸಿ ಬಸ್ಗೆ(ಆಕ್ಸಿಜನ್ ಆನ್ ವೀಲ್ಸ್) ಸೋಮವಾರ ಚಾಲನೆ ನೀಡಿದರು.</p>.<p>ನಾಯೋನಿಕ ಐ ಕೇರ್ ಟ್ರಸ್ಟ್, ಸಿಟ್ರಿಕ್ ಇಂಡಿಯಾ, ಜಿಲ್ಲಾಡಳಿತದ ಸಹಯೋಗದಲ್ಲಿ ಆಮ್ಲಜನಕ ವ್ಯವಸ್ಥೆಯ ಬಸ್ ಸಜ್ಜುಗೊಳಿಸಲಾಗಿದೆ. ಜಿಲ್ಲಾಸ್ಪತ್ರೆ ಆವರಣದಲ್ಲಿ ಈ ಬಸ್ ಇರಲಿದೆ.</p>.<p>ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚು ಇದೆ. ಆಸ್ಪತ್ರೆಗೆ ಕರೆತಂದ ಹೊಸ ರೋಗಿಗಳಿಗೆ ಆಮ್ಲಜನಕ ತುರ್ತಾಗಿ ಒದಗಿಸಬೇಕಿದ್ದರೆ, ವಿಳಂಬವಾಗುವುದನ್ನು ತಪಿಸುವ ನಿಟ್ಟಿನಲ್ಲಿ ಬಸ್ನಲ್ಲಿ ವ್ಯವಸ್ಥೆ ಮಾಡಲಾಗಿದೆ.</p>.<p>‘ಬಸ್ನಲ್ಲಿ ಆಮ್ಲಜನಕ ಕಾನ್ಸಂಟ್ರೆಟರ್ ಅಳವಡಿಸಿದ್ದಾರೆ. ಐವರಿಗೆ ಆಮ್ಲಜನಕ ಕಲ್ಪಿಸಲು ಬಸ್ನಲ್ಲಿ ವ್ಯವಸ್ಥೆ ಇದೆ’ ಎಂದು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಮೋಹನ್ ಕುಮಾರ್ ತಿಳಿಸಿದರು.</p>.<p>‘ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ನಲ್ಲಿ ಆಮ್ಲಜನಕ ವ್ಯವಸ್ಥೆ ಕಲ್ಪಿಸಲಾಗಿದೆ. ಈ ವ್ಯವಸ್ಥೆ ಯಶಸ್ವಿಯಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>