<p>ಚಿಕ್ಕಮಗಳೂರು: ‘ಪಿ.ಆರ್. ತಿಪ್ಪೇಸ್ವಾಮಿ ಅವರು ತಾವು ಬೆಳೆಯುವುದರ ಜೊತೆಗೆ ಇತರ ಕಲಾವಿದವರಿಗೆ ಪ್ರೋತ್ಸಾಹ ನೀಡಿ ಬೆಳೆಸಿದರು. ಅವರೊಬ್ಬ ಅಪರೂಪದ ಕಲಾವಿದ’ ಎಂದು ಶಿಲ್ಪಿ ಎಸ್.ಪಿ. ಜಯಣ್ಣಾಚಾರ್ ಬಣ್ಣಿಸಿದರು.</p>.<p>ಪಿ.ಆರ್. ತಿಪ್ಪೇಸ್ವಾಮಿ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಂತಿನಿಕೇತನ ಚಿತ್ರಕಲಾ ಮಹಾ ವಿದ್ಯಾಲಯದ ಸಹಯೋಗದಲ್ಲಿ ಶಾಂತಿ ನಿಕೇತನ ಚಿತ್ರಕಲಾ ವಿದ್ಯಾಲಯದಲ್ಲಿ ಆಯೋಜಿಸಿರುವ ಪಿ.ಆರ್.ತಿಪ್ಪೇಸ್ವಾಮಿ ಕಲಾ ಸಂಭ್ರಮ – 2021 ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಬಹಳಷ್ಟು ಕಲಾವಿದರ ಜೀವನ ಚರಿತ್ರೆಗಳ ಕೃತಿಗಳನ್ನು ರಚಿಸಿ ಉಪಕಾರ ಮಾಡಿದ್ದಾರೆ. ಕಲಾ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ’ ಎಂದರು.</p>.<p>ತಂತ್ರಜ್ಞಾನ ಕ್ಷೇತ್ರದಲ್ಲಿ ಇಂದು ಬಹಳಷ್ಟು ಅವಿಷ್ಕಾರಗಳಾಗಿವೆ.<br />ಕಲಾ ಕ್ಷೇತ್ರಕ್ಕೂ ತಂತ್ರಜ್ಞಾನ ಸಹಕಾರಿಯಾಗಿದೆ. ಕಲಾವಿದರು ಅದ್ಭುತ ಸಾಧನೆ ಮೆರೆಯುತ್ತಿದ್ದಾರೆ ಎಂದು ಹೇಳಿದರು.</p>.<p>ಕಲಾವಿದರಲ್ಲಿ ಕಲ್ಮಶ, ಕ್ರೌರ್ಯ ಇರುವುದಿಲ್ಲ. ಬಡತನ ಇದ್ದರೂ ಕಲಾವಿದರು ಖುಷಿಯಾಗಿಯೇ ಇರುತ್ತಾರೆ. ಕಲೆಯ ಅಭಿವ್ಯಕ್ತಿಯಲ್ಲೇ ತೃಪ್ತಿ ಪಡುತ್ತಾರೆ ಎಂದು ಹೇಳಿದರು.</p>.<p>ಉದ್ಘಾಟನೆ ನೆರವೇರಿಸಿದ ಭಾರತ್ ಸೇವಾದಳದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಚ್.ನರೇಂದ್ರ ಪೈ ಮಾತನಾಡಿ, ಕಲೆಗೆ ಸಂಬಂಧಿಸಿದ ಇಂಥ ಕಾರ್ಯಕ್ರಮವನ್ನು ನಗರದಲ್ಲಿ ಏರ್ಪಡಿ ಸಿರುವುದು ಶ್ಲಾಘನೀಯ ಎಂದು ಹೇಳಿದರು.</p>.<p>ಪಿಆರ್ಟಿ ಪ್ರತಿಷ್ಠಾನದ ಕಾರ್ಯದರ್ಶಿ ಕೆ.ಸಿ.ಮಹದೇವ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಉದ್ಯಮಿ ಡಿ.ಎಚ್.ನಟರಾಜ್, ಶಿಲ್ಪ ಕಲಾವಿದ ಎಂ.ರಾಮಮೂರ್ತಿ, ಸ್ಕೌಟ್ಸ್– ಗೈಡ್ಸ್ ಜಿಲ್ಲಾ ಮುಖ್ಯಸ್ಥ ಎಂ. ಷಡಕ್ಷರಿ, ಕರ್ನಾಟಕ ಲಲಿತ ಕಲಾ ಅಕಾಡೆಮಿ ಸದಸ್ಯೆ ಲಕ್ಷ್ಮಿ ಮೈಸೂರು, ಕಲಾವಿದರಾದ ಕಾಂತರಾಜು, ಎಂ.ಎಸ್.ಲಿಂಗರಾಜು, ಶಾಂತಿನಿಕೇತನ ಚಿತ್ರಕಲಾ ವಿದ್ಯಾಲಯದ ಪ್ರಾಚಾರ್ಯ ವಿಶ್ವಕರ್ಮ ಆಚಾರ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ‘ಪಿ.ಆರ್. ತಿಪ್ಪೇಸ್ವಾಮಿ ಅವರು ತಾವು ಬೆಳೆಯುವುದರ ಜೊತೆಗೆ ಇತರ ಕಲಾವಿದವರಿಗೆ ಪ್ರೋತ್ಸಾಹ ನೀಡಿ ಬೆಳೆಸಿದರು. ಅವರೊಬ್ಬ ಅಪರೂಪದ ಕಲಾವಿದ’ ಎಂದು ಶಿಲ್ಪಿ ಎಸ್.ಪಿ. ಜಯಣ್ಣಾಚಾರ್ ಬಣ್ಣಿಸಿದರು.</p>.<p>ಪಿ.ಆರ್. ತಿಪ್ಪೇಸ್ವಾಮಿ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಂತಿನಿಕೇತನ ಚಿತ್ರಕಲಾ ಮಹಾ ವಿದ್ಯಾಲಯದ ಸಹಯೋಗದಲ್ಲಿ ಶಾಂತಿ ನಿಕೇತನ ಚಿತ್ರಕಲಾ ವಿದ್ಯಾಲಯದಲ್ಲಿ ಆಯೋಜಿಸಿರುವ ಪಿ.ಆರ್.ತಿಪ್ಪೇಸ್ವಾಮಿ ಕಲಾ ಸಂಭ್ರಮ – 2021 ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಬಹಳಷ್ಟು ಕಲಾವಿದರ ಜೀವನ ಚರಿತ್ರೆಗಳ ಕೃತಿಗಳನ್ನು ರಚಿಸಿ ಉಪಕಾರ ಮಾಡಿದ್ದಾರೆ. ಕಲಾ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ’ ಎಂದರು.</p>.<p>ತಂತ್ರಜ್ಞಾನ ಕ್ಷೇತ್ರದಲ್ಲಿ ಇಂದು ಬಹಳಷ್ಟು ಅವಿಷ್ಕಾರಗಳಾಗಿವೆ.<br />ಕಲಾ ಕ್ಷೇತ್ರಕ್ಕೂ ತಂತ್ರಜ್ಞಾನ ಸಹಕಾರಿಯಾಗಿದೆ. ಕಲಾವಿದರು ಅದ್ಭುತ ಸಾಧನೆ ಮೆರೆಯುತ್ತಿದ್ದಾರೆ ಎಂದು ಹೇಳಿದರು.</p>.<p>ಕಲಾವಿದರಲ್ಲಿ ಕಲ್ಮಶ, ಕ್ರೌರ್ಯ ಇರುವುದಿಲ್ಲ. ಬಡತನ ಇದ್ದರೂ ಕಲಾವಿದರು ಖುಷಿಯಾಗಿಯೇ ಇರುತ್ತಾರೆ. ಕಲೆಯ ಅಭಿವ್ಯಕ್ತಿಯಲ್ಲೇ ತೃಪ್ತಿ ಪಡುತ್ತಾರೆ ಎಂದು ಹೇಳಿದರು.</p>.<p>ಉದ್ಘಾಟನೆ ನೆರವೇರಿಸಿದ ಭಾರತ್ ಸೇವಾದಳದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಚ್.ನರೇಂದ್ರ ಪೈ ಮಾತನಾಡಿ, ಕಲೆಗೆ ಸಂಬಂಧಿಸಿದ ಇಂಥ ಕಾರ್ಯಕ್ರಮವನ್ನು ನಗರದಲ್ಲಿ ಏರ್ಪಡಿ ಸಿರುವುದು ಶ್ಲಾಘನೀಯ ಎಂದು ಹೇಳಿದರು.</p>.<p>ಪಿಆರ್ಟಿ ಪ್ರತಿಷ್ಠಾನದ ಕಾರ್ಯದರ್ಶಿ ಕೆ.ಸಿ.ಮಹದೇವ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಉದ್ಯಮಿ ಡಿ.ಎಚ್.ನಟರಾಜ್, ಶಿಲ್ಪ ಕಲಾವಿದ ಎಂ.ರಾಮಮೂರ್ತಿ, ಸ್ಕೌಟ್ಸ್– ಗೈಡ್ಸ್ ಜಿಲ್ಲಾ ಮುಖ್ಯಸ್ಥ ಎಂ. ಷಡಕ್ಷರಿ, ಕರ್ನಾಟಕ ಲಲಿತ ಕಲಾ ಅಕಾಡೆಮಿ ಸದಸ್ಯೆ ಲಕ್ಷ್ಮಿ ಮೈಸೂರು, ಕಲಾವಿದರಾದ ಕಾಂತರಾಜು, ಎಂ.ಎಸ್.ಲಿಂಗರಾಜು, ಶಾಂತಿನಿಕೇತನ ಚಿತ್ರಕಲಾ ವಿದ್ಯಾಲಯದ ಪ್ರಾಚಾರ್ಯ ವಿಶ್ವಕರ್ಮ ಆಚಾರ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>