<p><strong>ಮೂಡಿಗೆರೆ:</strong> ಶಿವರಾತ್ರಿ ಅಂಗವಾಗಿ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿರುವ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ತಾಲ್ಲೂಕಿನ ಗಡಿಯಾದ ಕಸ್ಕೇಬೈಲ್ನಿಂದ ಚಾರ್ಮಾಡಿ ಘಾಟಿವರೆಗೆ ತೆರೆದಿರುವ ತಿನಿಸುಗಳ ಅಂಗಡಿಗಳು ರಾತ್ರಿಯಿಡೀ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದವು. ಹಗಲು ವೇಳೆ ನೆತ್ತಿ ಸುಡುವ ಬಿಸಿಲು ಇರುವುದರಿಂದ ಹೆಚ್ಚಿನವರು ರಾತ್ರಿ ಪಾದಯಾತ್ರೆ ನಡೆಸುತ್ತಾರೆ. </p>.<p>ನೀರಿನ ಪ್ಲಾಸ್ಟಿಕ್ ಬಾಟಲಿಗಳು, ತಿನಿಸುಗಳ ಪ್ಲಾಸ್ಟಿಕ್ ಕವರ್ಗಳು, ಐಸ್ಕ್ರೀಂ ಕಪ್ಗಳು ಸೇರಿದಂತೆ ರಸ್ತೆ ಬದಿಯಲ್ಲಿ ಕಸವನ್ನು ಎಸೆಯಲಾಗಿದೆ. ಪಾದಯಾತ್ರಿಗಳಿಗೆ ಅನುಕೂಲವಾಗಲು ದಾನಿಗಳು ಚಹಾ, ಕಾಫಿ, ಹಾಲನ್ನು ಉಚಿತವಾಗಿ ವಿತರಿಸುತ್ತಿದ್ದಾರೆ. ಮುಗ್ರಹಳ್ಳಿ ಗ್ರಾಮದಲ್ಲಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಮಜ್ಜಿಗೆ, ಹಣ್ಣು ವಿತರಿಸಿದರು. </p>.<p>ಪಾದಯಾತ್ರೆಯಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುದ ಗ್ರಾಮದ ಕುಮಾರ್ ಎಂಬುವರು ಕೊಟ್ಟಿಗೆಹಾರದಲ್ಲಿ ಕುಸಿದು ಬಿದ್ದರು. ತಕ್ಷಣವೇ ಸಮಾಜ ಸೇವಕ ಆರೀಫ್ ಅವರ ಆಂಬುಲೆನ್ಸ್ ಮೂಲಕ ಅವರನ್ನು ಮೂಡಿಗೆರೆಯ ಮಹಾತ್ಮಗಾಂಧಿ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು.</p>.<p>ಪಾದಯಾತ್ರಿಗಳಿಗಾಗಿ ಆರೀಫ್ ಅವರು ಉಚಿತವಾಗಿ ಆಂಬುಲೆನ್ಸ್ ಸೇವೆ ಒದಗಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ:</strong> ಶಿವರಾತ್ರಿ ಅಂಗವಾಗಿ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿರುವ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ತಾಲ್ಲೂಕಿನ ಗಡಿಯಾದ ಕಸ್ಕೇಬೈಲ್ನಿಂದ ಚಾರ್ಮಾಡಿ ಘಾಟಿವರೆಗೆ ತೆರೆದಿರುವ ತಿನಿಸುಗಳ ಅಂಗಡಿಗಳು ರಾತ್ರಿಯಿಡೀ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದವು. ಹಗಲು ವೇಳೆ ನೆತ್ತಿ ಸುಡುವ ಬಿಸಿಲು ಇರುವುದರಿಂದ ಹೆಚ್ಚಿನವರು ರಾತ್ರಿ ಪಾದಯಾತ್ರೆ ನಡೆಸುತ್ತಾರೆ. </p>.<p>ನೀರಿನ ಪ್ಲಾಸ್ಟಿಕ್ ಬಾಟಲಿಗಳು, ತಿನಿಸುಗಳ ಪ್ಲಾಸ್ಟಿಕ್ ಕವರ್ಗಳು, ಐಸ್ಕ್ರೀಂ ಕಪ್ಗಳು ಸೇರಿದಂತೆ ರಸ್ತೆ ಬದಿಯಲ್ಲಿ ಕಸವನ್ನು ಎಸೆಯಲಾಗಿದೆ. ಪಾದಯಾತ್ರಿಗಳಿಗೆ ಅನುಕೂಲವಾಗಲು ದಾನಿಗಳು ಚಹಾ, ಕಾಫಿ, ಹಾಲನ್ನು ಉಚಿತವಾಗಿ ವಿತರಿಸುತ್ತಿದ್ದಾರೆ. ಮುಗ್ರಹಳ್ಳಿ ಗ್ರಾಮದಲ್ಲಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಮಜ್ಜಿಗೆ, ಹಣ್ಣು ವಿತರಿಸಿದರು. </p>.<p>ಪಾದಯಾತ್ರೆಯಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುದ ಗ್ರಾಮದ ಕುಮಾರ್ ಎಂಬುವರು ಕೊಟ್ಟಿಗೆಹಾರದಲ್ಲಿ ಕುಸಿದು ಬಿದ್ದರು. ತಕ್ಷಣವೇ ಸಮಾಜ ಸೇವಕ ಆರೀಫ್ ಅವರ ಆಂಬುಲೆನ್ಸ್ ಮೂಲಕ ಅವರನ್ನು ಮೂಡಿಗೆರೆಯ ಮಹಾತ್ಮಗಾಂಧಿ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು.</p>.<p>ಪಾದಯಾತ್ರಿಗಳಿಗಾಗಿ ಆರೀಫ್ ಅವರು ಉಚಿತವಾಗಿ ಆಂಬುಲೆನ್ಸ್ ಸೇವೆ ಒದಗಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>