<p><strong>ಅಜ್ಜಂಪುರ: ‘</strong>ವೀರಶೈವ ಧರ್ಮದ ಪಂಚ ಪೀಠಗಳ ಒಕ್ಕೂಟ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸುವ ಅಗತ್ಯವಿದೆ’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಬುಕ್ಕಾಂಬುಧಿ ತಪೋಕ್ಷೇತ್ರದಲ್ಲಿ ಈಚೆಗೆ ಲಿಂಗೈಕ್ಯ ಉಜ್ಜಯಿನಿ ಸಿದ್ಧಲಿಂಗ ಶಿವಾಚಾರ್ಯರ 90ನೇ ವರ್ಷದ ಸ್ಮರಣೋತ್ಸವ ಹಾಗೂ ರಂಭಾಪುರಿ ವೀರಸೋಮೇಶ್ವರ ಶಿವಾಚಾರ್ಯರ 70ನೇ ವರ್ಷದ ಜನ್ಮವರ್ಧಂತಿ ಮಹೋತ್ಸವ ಪ್ರಯುಕ್ತ ಜರುಗಿದ ಜನಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ, ಅವರು ಮಾತನಾಡಿದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದು, ಈಚೆಗೆ ನಿಧನರಾದ ಶ್ಯಾಮನೂರು ಶಿವಶಂಕರಪ್ಪ ಶಿಕ್ಷಣ, ರಾಜಕೀಯ, ಸಮಾಜ ಸೇವೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸರ್ಕಾರ, ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಆಗ್ರಹಿಸಿದರು.</p>.<p>ರಂಭಾಪುರಿ ಪೀಠ ನೀಡುವ ರೇಣುಕಾಚಾರ್ಯ ಪ್ರಶಸ್ತಿಯನ್ನು ಅಮೆರಿಕಾದಲ್ಲಿ ನೆಲೆಸಿರುವ ದಾವಣಗೆರೆ ಮೂಲಕ ಲೇಖಕ ರವಿ ಹಂಜ್ ಅವರಿಗೆ ರೇಣುಕಾಚಾರ್ಯ ಜಯಂತಿಯಂದು ಪ್ರಧಾನ ಮಾಡಲಾಗುವುದು ಎಂದು ಅವರು ಪ್ರಕಟಿಸಿದರು.</p>.<p>ಮುಂದಿನ ವರ್ಷದಿಂದ ಲಿಂಗೈಕ್ಯ ಉಜ್ಜಯಿನಿ ಸಿದ್ಧಲಿಂಗ ಶಿವಾಚಾರ್ಯರ ಪುಣ್ಯಸ್ಮರಣೆ ಪ್ರಯುಕ್ತ ಓರ್ವ ಕ್ರಿಯಾಶೀಲ ಶಿವಾಚಾರ್ಯರಿಗೆ ಲಿಂಗೈಕ್ಯ ಶಿವಾಚಾರ್ಯರ ಹೆಸರಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಅವರು ತಿಳಿಸಿದರು. </p>.<p>ಕಾಶಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಇಲ್ಲಿನ ತಪೋಬೆಟ್ಟದಲ್ಲಿ ತಪಸ್ಸು ಮಾಡಿ, ಜನರ ಸಂಕಷ್ಟ ಪರಿಹರಿಸಿದ ಲಿಂಗೈಕ್ಯ ಉಜ್ಜಯಿನಿ ಸಿದ್ಧಲಿಂಗ ಶಿವಾಚಾರ್ಯರ ಪುಣ್ಯಸ್ಮರಣೆ ನಡೆಯುತ್ತಿರುವುದು ಹರ್ಷ ತಂದಿದೆ ಎಂದರು.</p>.<p>ಲಿಂಗೈಕ್ಯ ಶಿವಾಚಾರ್ಯರ ಶ್ರಮ, ಸಾಧನೆ ಹಾಗೂ ಆದರ್ಶ ದಾರಿ ಸಾಧಕರಿಗೆ ದಿಕ್ಸೂಚಿಯಾಗಿದೆ ಎಂದು ಉಜ್ಜಯಿನಿ ಸಿದ್ಧಲಿಂಗ ಶಿವಾಚಾರ್ಯರು ಅಭಿಪ್ರಾಯಪಟ್ಟರು.</p>.<p>ಇದೇ ವೇಳೆ ಲೇಖಕ ರವಿ ಹಂಜ್ ‘ಪಂಚಾಚಾರ್ಯ ವಾಣಿ’ ಗ್ರಂಥ ಹಾಗೂ ಅಖಿಲ ಭಾರತ ಶಿವಾಚಾರ್ಯ ಸಂಸ್ಥೆ ಅಧ್ಯಕ್ಷ ಸಿಂದಗಿ ಪ್ರಭು ಸಾರಂಗದೇವ ಶಿವಾಚಾರ್ಯರು ‘ರಂಭಾಪುರಿ ಬೆಳಗು’ ಪತ್ರಿಕೆ ಬಿಡುಗಡೆಗೊಳಿಸಿದರು.</p>.<p>ಮಳಲಿ ಮಠದ ನಾಗಭೂಷಣ ಶಿವಾಚಾರ್ಯರು, ಹಳೇಹುಬ್ಬಳ್ಳಿ ಪಂಚಗೃಹ ಹಿರೇಮಠದ ರೇಣುಕ ಪ್ರಸಾದ್ ಗುರುರಕ್ಷೆ ನೀಡಲಾಯಿತು. ಎಡೆಯೂರು ರೇಣುಕ ಶಿವಾಚಾರ್ಯರು, ವಿರೂಪಾಕ್ಷಲಿಂಗ ಶಿವಾಚಾರ್ಯರು, ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯರು, ಮಲಯ ಶಾಂತಮುನಿ ಶಿವಾಚಾರ್ಯರು ಆಶೀರ್ವಚನ ನೀಡಿದರು.</p>.<p>ಮಹಾಂತಲಿಂಗ ಶಿವಾಚಾರ್ಯರು, ಸಿದ್ಧಲಿಂಗ ಶಿವಾಚಾರ್ಯರು, ವಾಮದೇವ ಮಹಾಂತ ಶಿವಾಚಾರ್ಯರು, ರುದ್ರಮುನಿ ಶಿವಾಚಾರ್ಯರು, ನಂದೀಶ್ವರ ಶಿವಾಚಾರ್ಯರು, ಗುರುಮೂರ್ತಿ ಶಿವಾಚಾರ್ಯರು, ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಕೋಣಂದೂರ ಪ್ರಕಾಶ, ಎಚ್.ಎಂ. ಲೋಕೇಶ್, ಶಿವಸ್ವಾಮಿ ಇದ್ದರು.</p>.<p>ಶಾಂಭವಿ ಮಹಿಳಾ ಮಂಡಳ ಸದಸ್ಯರು ಪ್ರಾರ್ಥನೆ ಸಲ್ಲಿಸಿದರು. ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ಶಿವಾಚಾರ್ಯ ಟ್ರಸ್ಟ್ ಹಾಗೂ ಭಕ್ತರು ಕಾರ್ಯಕ್ರಮ ಆಯೋಜಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಜ್ಜಂಪುರ: ‘</strong>ವೀರಶೈವ ಧರ್ಮದ ಪಂಚ ಪೀಠಗಳ ಒಕ್ಕೂಟ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸುವ ಅಗತ್ಯವಿದೆ’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಬುಕ್ಕಾಂಬುಧಿ ತಪೋಕ್ಷೇತ್ರದಲ್ಲಿ ಈಚೆಗೆ ಲಿಂಗೈಕ್ಯ ಉಜ್ಜಯಿನಿ ಸಿದ್ಧಲಿಂಗ ಶಿವಾಚಾರ್ಯರ 90ನೇ ವರ್ಷದ ಸ್ಮರಣೋತ್ಸವ ಹಾಗೂ ರಂಭಾಪುರಿ ವೀರಸೋಮೇಶ್ವರ ಶಿವಾಚಾರ್ಯರ 70ನೇ ವರ್ಷದ ಜನ್ಮವರ್ಧಂತಿ ಮಹೋತ್ಸವ ಪ್ರಯುಕ್ತ ಜರುಗಿದ ಜನಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ, ಅವರು ಮಾತನಾಡಿದರು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದು, ಈಚೆಗೆ ನಿಧನರಾದ ಶ್ಯಾಮನೂರು ಶಿವಶಂಕರಪ್ಪ ಶಿಕ್ಷಣ, ರಾಜಕೀಯ, ಸಮಾಜ ಸೇವೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸರ್ಕಾರ, ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಆಗ್ರಹಿಸಿದರು.</p>.<p>ರಂಭಾಪುರಿ ಪೀಠ ನೀಡುವ ರೇಣುಕಾಚಾರ್ಯ ಪ್ರಶಸ್ತಿಯನ್ನು ಅಮೆರಿಕಾದಲ್ಲಿ ನೆಲೆಸಿರುವ ದಾವಣಗೆರೆ ಮೂಲಕ ಲೇಖಕ ರವಿ ಹಂಜ್ ಅವರಿಗೆ ರೇಣುಕಾಚಾರ್ಯ ಜಯಂತಿಯಂದು ಪ್ರಧಾನ ಮಾಡಲಾಗುವುದು ಎಂದು ಅವರು ಪ್ರಕಟಿಸಿದರು.</p>.<p>ಮುಂದಿನ ವರ್ಷದಿಂದ ಲಿಂಗೈಕ್ಯ ಉಜ್ಜಯಿನಿ ಸಿದ್ಧಲಿಂಗ ಶಿವಾಚಾರ್ಯರ ಪುಣ್ಯಸ್ಮರಣೆ ಪ್ರಯುಕ್ತ ಓರ್ವ ಕ್ರಿಯಾಶೀಲ ಶಿವಾಚಾರ್ಯರಿಗೆ ಲಿಂಗೈಕ್ಯ ಶಿವಾಚಾರ್ಯರ ಹೆಸರಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಅವರು ತಿಳಿಸಿದರು. </p>.<p>ಕಾಶಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಇಲ್ಲಿನ ತಪೋಬೆಟ್ಟದಲ್ಲಿ ತಪಸ್ಸು ಮಾಡಿ, ಜನರ ಸಂಕಷ್ಟ ಪರಿಹರಿಸಿದ ಲಿಂಗೈಕ್ಯ ಉಜ್ಜಯಿನಿ ಸಿದ್ಧಲಿಂಗ ಶಿವಾಚಾರ್ಯರ ಪುಣ್ಯಸ್ಮರಣೆ ನಡೆಯುತ್ತಿರುವುದು ಹರ್ಷ ತಂದಿದೆ ಎಂದರು.</p>.<p>ಲಿಂಗೈಕ್ಯ ಶಿವಾಚಾರ್ಯರ ಶ್ರಮ, ಸಾಧನೆ ಹಾಗೂ ಆದರ್ಶ ದಾರಿ ಸಾಧಕರಿಗೆ ದಿಕ್ಸೂಚಿಯಾಗಿದೆ ಎಂದು ಉಜ್ಜಯಿನಿ ಸಿದ್ಧಲಿಂಗ ಶಿವಾಚಾರ್ಯರು ಅಭಿಪ್ರಾಯಪಟ್ಟರು.</p>.<p>ಇದೇ ವೇಳೆ ಲೇಖಕ ರವಿ ಹಂಜ್ ‘ಪಂಚಾಚಾರ್ಯ ವಾಣಿ’ ಗ್ರಂಥ ಹಾಗೂ ಅಖಿಲ ಭಾರತ ಶಿವಾಚಾರ್ಯ ಸಂಸ್ಥೆ ಅಧ್ಯಕ್ಷ ಸಿಂದಗಿ ಪ್ರಭು ಸಾರಂಗದೇವ ಶಿವಾಚಾರ್ಯರು ‘ರಂಭಾಪುರಿ ಬೆಳಗು’ ಪತ್ರಿಕೆ ಬಿಡುಗಡೆಗೊಳಿಸಿದರು.</p>.<p>ಮಳಲಿ ಮಠದ ನಾಗಭೂಷಣ ಶಿವಾಚಾರ್ಯರು, ಹಳೇಹುಬ್ಬಳ್ಳಿ ಪಂಚಗೃಹ ಹಿರೇಮಠದ ರೇಣುಕ ಪ್ರಸಾದ್ ಗುರುರಕ್ಷೆ ನೀಡಲಾಯಿತು. ಎಡೆಯೂರು ರೇಣುಕ ಶಿವಾಚಾರ್ಯರು, ವಿರೂಪಾಕ್ಷಲಿಂಗ ಶಿವಾಚಾರ್ಯರು, ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯರು, ಮಲಯ ಶಾಂತಮುನಿ ಶಿವಾಚಾರ್ಯರು ಆಶೀರ್ವಚನ ನೀಡಿದರು.</p>.<p>ಮಹಾಂತಲಿಂಗ ಶಿವಾಚಾರ್ಯರು, ಸಿದ್ಧಲಿಂಗ ಶಿವಾಚಾರ್ಯರು, ವಾಮದೇವ ಮಹಾಂತ ಶಿವಾಚಾರ್ಯರು, ರುದ್ರಮುನಿ ಶಿವಾಚಾರ್ಯರು, ನಂದೀಶ್ವರ ಶಿವಾಚಾರ್ಯರು, ಗುರುಮೂರ್ತಿ ಶಿವಾಚಾರ್ಯರು, ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಕೋಣಂದೂರ ಪ್ರಕಾಶ, ಎಚ್.ಎಂ. ಲೋಕೇಶ್, ಶಿವಸ್ವಾಮಿ ಇದ್ದರು.</p>.<p>ಶಾಂಭವಿ ಮಹಿಳಾ ಮಂಡಳ ಸದಸ್ಯರು ಪ್ರಾರ್ಥನೆ ಸಲ್ಲಿಸಿದರು. ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ಶಿವಾಚಾರ್ಯ ಟ್ರಸ್ಟ್ ಹಾಗೂ ಭಕ್ತರು ಕಾರ್ಯಕ್ರಮ ಆಯೋಜಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>