<p><strong>ಕಡೂರು</strong>: ‘ಸ್ಥಳೀಯವಾಗಿಯೇ ಹಲವು ಸಮಸ್ಯೆ ಪರಿಹರಿಸಿಕೊಳ್ಳುವ ಅವಕಾಶ ಪಂಚಾಯಿತಿ ಕಟ್ಟೆಯಲ್ಲಿದೆ’ ಎಂದು ಚಿಕ್ಕಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ ಎಂ.ನಾಯ್ಕ ಹೇಳಿದರು.</p>.<p>ಚಿಕ್ಕಂಗಳ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ನಡೆದ ಪಂಚಾಯಿತಿ ಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಭಾಗದಲ್ಲಿ ಹಲವು ಸಮಸ್ಯೆಗಳನ್ನು ಹೆಚ್ಚಿನ ಶ್ರಮವಿಲ್ಲದೆ ಬಗೆಹರಿಸಬಹುದು. ಆದರೆ, ಅದಕ್ಕೆ ಒಂದಿಷ್ಟು ಸಹನೆ, ಸಮಸ್ಯೆ ಆಲಿಸುವ ವ್ಯವಧಾನ ಇರಬೇಕು. ಸಮಸ್ಯೆಯ ಮೂಲವನ್ನು ಅರಿತು ಪರಿಹರಿಸುವ ನಿಟ್ಟಿನಲ್ಲಿ ಪಂಚಾಯಿತಿ ಕಟ್ಟೆ ಹಿಂದಿನ ಕಾಲದ ಗ್ರಾಮೀಣ ಪದ್ಧತಿ ನೆನಪಿಸುತ್ತದೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಸಿ.ಆರ್.ಪ್ರವೀಣ್ ಉದ್ಘಾಟಿಸಿ ಮಾತನಾಡಿ, ‘ಇಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ, ಇಲ್ಲಿಯೇ ಬಗೆಹರಿಸಲು ಗ್ರಾಮ ಪಂಚಾಯಿತಿ ಮುಂದಾಗಬೇಕು. ಸಂಕೀರ್ಣವಾದ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗದಿದ್ದರೆ ಸಂಬಂಧಿಸಿದ ಇಲಾಖೆಗಳಿಗೆ ಕಳುಹಿಸಬೇಕು’ ಎಂದು ಸೂಚಿಸಿದರು.</p>.<p>ನೋಡಲ್ ಅಧಿಕಾರಿ ಸ್ವಾಮಿ ನಿಂಗಪ್ಪ, ಪಿಡಿಒ ಚಂದ್ರಪ್ಪ, ಎಸ್.ಡಿ.ಎ ಬಿ.ಎಂ.ಪ್ರವೀಣ್ ಮತ್ತು ಗ್ರಾಮಸ್ಥರು ಇದ್ದರು. ಗ್ರಾಮದ ಹಲವು ಸಮಸ್ಯೆಗಳನ್ನು ಗ್ರಾಮಸ್ಥರು ಪಂಚಾಯಿತಿ ಗಮನಕ್ಕೆ ಲಿಖಿತವಾಗಿ ತಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು</strong>: ‘ಸ್ಥಳೀಯವಾಗಿಯೇ ಹಲವು ಸಮಸ್ಯೆ ಪರಿಹರಿಸಿಕೊಳ್ಳುವ ಅವಕಾಶ ಪಂಚಾಯಿತಿ ಕಟ್ಟೆಯಲ್ಲಿದೆ’ ಎಂದು ಚಿಕ್ಕಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ ಎಂ.ನಾಯ್ಕ ಹೇಳಿದರು.</p>.<p>ಚಿಕ್ಕಂಗಳ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ನಡೆದ ಪಂಚಾಯಿತಿ ಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಭಾಗದಲ್ಲಿ ಹಲವು ಸಮಸ್ಯೆಗಳನ್ನು ಹೆಚ್ಚಿನ ಶ್ರಮವಿಲ್ಲದೆ ಬಗೆಹರಿಸಬಹುದು. ಆದರೆ, ಅದಕ್ಕೆ ಒಂದಿಷ್ಟು ಸಹನೆ, ಸಮಸ್ಯೆ ಆಲಿಸುವ ವ್ಯವಧಾನ ಇರಬೇಕು. ಸಮಸ್ಯೆಯ ಮೂಲವನ್ನು ಅರಿತು ಪರಿಹರಿಸುವ ನಿಟ್ಟಿನಲ್ಲಿ ಪಂಚಾಯಿತಿ ಕಟ್ಟೆ ಹಿಂದಿನ ಕಾಲದ ಗ್ರಾಮೀಣ ಪದ್ಧತಿ ನೆನಪಿಸುತ್ತದೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಸಿ.ಆರ್.ಪ್ರವೀಣ್ ಉದ್ಘಾಟಿಸಿ ಮಾತನಾಡಿ, ‘ಇಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ, ಇಲ್ಲಿಯೇ ಬಗೆಹರಿಸಲು ಗ್ರಾಮ ಪಂಚಾಯಿತಿ ಮುಂದಾಗಬೇಕು. ಸಂಕೀರ್ಣವಾದ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗದಿದ್ದರೆ ಸಂಬಂಧಿಸಿದ ಇಲಾಖೆಗಳಿಗೆ ಕಳುಹಿಸಬೇಕು’ ಎಂದು ಸೂಚಿಸಿದರು.</p>.<p>ನೋಡಲ್ ಅಧಿಕಾರಿ ಸ್ವಾಮಿ ನಿಂಗಪ್ಪ, ಪಿಡಿಒ ಚಂದ್ರಪ್ಪ, ಎಸ್.ಡಿ.ಎ ಬಿ.ಎಂ.ಪ್ರವೀಣ್ ಮತ್ತು ಗ್ರಾಮಸ್ಥರು ಇದ್ದರು. ಗ್ರಾಮದ ಹಲವು ಸಮಸ್ಯೆಗಳನ್ನು ಗ್ರಾಮಸ್ಥರು ಪಂಚಾಯಿತಿ ಗಮನಕ್ಕೆ ಲಿಖಿತವಾಗಿ ತಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>