ಈಗಾಗಲೇ 60ಕ್ಕಿಂತಲೂ ಹೆಚ್ಚಿನ ರೋಗಿಗಳು ಇಲ್ಲಿ ಡಯಾಲಿಸಿಸ್ಗಾಗಿ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಆಗಾಗ್ಗೆ ಬಂದು ವಿಚಾರಿಸುತ್ತಿದ್ದಾರೆ. ಆದರೆ, ವಿಚಾರಣೆಗೆ ಬಂದವರಿಗೆ ಇಲ್ಲಿನ ಸಿಬಂದಿ ತಾಂತ್ರಿಕ ಸಿಬಂದಿ ಇಲ್ಲ ಎಂದು ಹೇಳಿ ವಾಪಾಸ್ ಕಳಿಸುತ್ತಿದ್ದಾರೆ. ಸ್ವಚ್ಛತೆಗೆ ಪ್ರಶಸ್ತಿ ಪಡೆಕೊಂಡಿದ್ದ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರವು ಆರೋಗ್ಯ ಸೇವೆಗೂ ಹೆಸರಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ವೈದ್ಯರು, ಸಿಬಂದಿ ಹಾಗೂ ಸೌಲಭ್ಯಗಳ ಕೊರತೆಯಿಂದ ಬಡವರಿಗೆ ಸಮರ್ಪಕವಾದ ಆರೋಗ್ಯ ಸೇವೆ ಲಭಿಸುತ್ತಿಲ್ಲ.