<p>ಉಡುಪಿ: ‘ಭಗವದ್ಗೀತೆಯ ಪ್ರಚಾರದಿಂದ ವಿಶ್ವದಲ್ಲಿ ಶಾಂತಿ ನೆಲೆಸಲು ಸಾಧ್ಯ. ಶಸ್ತ್ರಾಸ್ತ್ರಗಳಿಂದ ಶಾಂತಿಯನ್ನು ಸ್ಥಾಪನೆ ಮಾಡಲು ಸಾಧ್ಯವಿಲ್ಲ. ಶಾಸ್ತ್ರಾರ್ಥಗಳಿಂದ ಶಾಂತಿ ಸ್ಥಾಪನೆ ಮಾಡಬಹುದು’ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು.</p>.<p>ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಗೀತಾ ಮಂದಿರದಲ್ಲಿ ಶುಕ್ರವಾರ ನಡೆದ ನೂತನ ಶ್ರೀಪುತ್ತಿಗೆ ನೃಸಿಂಹ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಜಗತ್ತಿನಲ್ಲಿ ಪರಸ್ಪರ ಪ್ರೀತಿ, ವಿಶ್ವಾಸದ ಮೂಲಕ ಶಾಂತಿ ನೆಲೆಗೊಳ್ಳಬೇಕಾದರೆ ಅದಕ್ಕಾಗಿ ಭಗವದ್ಗೀತೆಯನ್ನು ಪ್ರಧಾನವಾಗಿಟ್ಟುಕೊಂಡು ವಿಶ್ವವನ್ನು ಕಟ್ಟಬೇಕು’ ಎಂದರು.</p>.<p>ಸಭಾಭವನ ಉದ್ಘಾಟಿಸಿದ ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ‘ಇಡೀ ಜಗತ್ತಿಗೆ ಧಾರ್ಮಿಕವಾಗಿ ಮಾರ್ಗದರ್ಶನ ಮಾಡುವಂತಹ ದೇಶ ನಮ್ಮದು. ಪುತ್ತಿಗೆ ಶ್ರೀಗಳು ಜಗತ್ತಿನಾದ್ಯಂತ ಭಗವದ್ಗೀತೆಯ ಸಂದೇಶವನ್ನು ಪಸರಿಸುವ ಕೆಲಸ ಮಾಡುತ್ತಿದ್ದಾರೆ’ ಎಂದರು.</p>.<p>‘ಜಾತಿ, ಮತ, ಕುಲ, ಪ್ರಾಂತೀಯತೆಯ ಸಂಕೋಲೆ ಒಡೆದು ನಾವು ಎತ್ತರವಾಗಿ ನಿಲ್ಲಬೇಕು’ ಎಂದು ಒಡಿಶಾ ಹೈಕೋರ್ಟ್ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ‘ಭಗವದ್ಗೀತೆಯ ಪ್ರಚಾರದಿಂದ ವಿಶ್ವದಲ್ಲಿ ಶಾಂತಿ ನೆಲೆಸಲು ಸಾಧ್ಯ. ಶಸ್ತ್ರಾಸ್ತ್ರಗಳಿಂದ ಶಾಂತಿಯನ್ನು ಸ್ಥಾಪನೆ ಮಾಡಲು ಸಾಧ್ಯವಿಲ್ಲ. ಶಾಸ್ತ್ರಾರ್ಥಗಳಿಂದ ಶಾಂತಿ ಸ್ಥಾಪನೆ ಮಾಡಬಹುದು’ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು.</p>.<p>ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಗೀತಾ ಮಂದಿರದಲ್ಲಿ ಶುಕ್ರವಾರ ನಡೆದ ನೂತನ ಶ್ರೀಪುತ್ತಿಗೆ ನೃಸಿಂಹ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಜಗತ್ತಿನಲ್ಲಿ ಪರಸ್ಪರ ಪ್ರೀತಿ, ವಿಶ್ವಾಸದ ಮೂಲಕ ಶಾಂತಿ ನೆಲೆಗೊಳ್ಳಬೇಕಾದರೆ ಅದಕ್ಕಾಗಿ ಭಗವದ್ಗೀತೆಯನ್ನು ಪ್ರಧಾನವಾಗಿಟ್ಟುಕೊಂಡು ವಿಶ್ವವನ್ನು ಕಟ್ಟಬೇಕು’ ಎಂದರು.</p>.<p>ಸಭಾಭವನ ಉದ್ಘಾಟಿಸಿದ ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ‘ಇಡೀ ಜಗತ್ತಿಗೆ ಧಾರ್ಮಿಕವಾಗಿ ಮಾರ್ಗದರ್ಶನ ಮಾಡುವಂತಹ ದೇಶ ನಮ್ಮದು. ಪುತ್ತಿಗೆ ಶ್ರೀಗಳು ಜಗತ್ತಿನಾದ್ಯಂತ ಭಗವದ್ಗೀತೆಯ ಸಂದೇಶವನ್ನು ಪಸರಿಸುವ ಕೆಲಸ ಮಾಡುತ್ತಿದ್ದಾರೆ’ ಎಂದರು.</p>.<p>‘ಜಾತಿ, ಮತ, ಕುಲ, ಪ್ರಾಂತೀಯತೆಯ ಸಂಕೋಲೆ ಒಡೆದು ನಾವು ಎತ್ತರವಾಗಿ ನಿಲ್ಲಬೇಕು’ ಎಂದು ಒಡಿಶಾ ಹೈಕೋರ್ಟ್ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>