<p><strong>ಚಿಕ್ಕಮಗಳೂರು:</strong> ಕಡೂರು ತಾಲ್ಲೂಕಿನಲ್ಲಿ ಮಧ್ಯ ವಯಸ್ಸಿನವರಿಗೆ ಅಕ್ರಮವಾಗಿ ವೃದ್ಧಾಪ್ಯ ವೇತನ ಮಂಜೂರು ಮಾಡಿರುವ ಆರೋಪದಲ್ಲಿ ಕಂದಾಯ ಇಲಾಖೆಯ ಎಂಟು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.</p>.<p>ನಾಡ ಕಚೇರಿ ವಿಷಯ ನಿರ್ವಾಹಕ ಗಿರೀಶ್, ಕಂದಾಯ ಅಧಿಕಾರಿ ಪಿ.ಆರ್.ರವಿಕುಮಾರ್, ಗ್ರಾಮ ಆಡಳಿತಾಧಿಕಾರಿಗಳಾದ ನಿರ್ಮಲಾ ಟಿ.ಎಸ್., ಹನುಮಂತಪ್ಪ ಆರ್., ರವಿ ಕೆ.ಆರ್., ಲಿಂಗರಾಜು ಕೆ.,ಕಾವ್ಯಾ ಟಿ.ಎಂ., ಕುಮಾರ್ ಜೆ.ಎಂ. ಅವರನ್ನು ಅಮಾನತು ಮಾಡಲಾಗಿದೆ.</p>.<p>ಎನ್.ಕೆ.(ನಾಡ ಕಚೇರಿ)–5 ತಂತ್ರಾಂಶದಲ್ಲಿ ಅಕ್ರಮವಾಗಿ 64 ಜನರಿಗೆ ಪಿಂಚಣಿ ಮಂಜೂರು ಮಾಡಿ ಸರ್ಕಾರಕ್ಕೆ ₹9.03 ಲಕ್ಷ ನಷ್ಟ ಮಾಡಿದ್ದಾರೆ ಎಂದು ತಹಶೀಲ್ದಾರ್ ವರದಿಯಲ್ಲಿ ತಿಳಿಸಿದ್ದರು. ಅದನ್ನು ಆಧರಿಸಿ ತನಿಖೆ ನಡೆಸಿದ್ದ ಕಂದಾಯ ಇಲಾಖೆ, 11 ಜನರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು.</p>.<p>ಕಡೂರು ತಹಶೀಲ್ದಾರ್ ಇತ್ತೀಚೆಗೆ ಮತ್ತೊಂದು ವರದಿಯನ್ನು ಸಲ್ಲಿಸಿದ್ದು, ಕಡೂರು ತಾಲ್ಲೂಕಿನ ಕಸಬಾ ಹೋಬಳಿಯಲ್ಲಿ ಎನ್.ಕೆ.–4 ತಂತ್ರಾಂಶದಲ್ಲೂ 1,485 ಅನರ್ಹರಿಗೆ ಅಕ್ರಮವಾಗಿ ಪಿಂಚಣಿ ಮಂಜೂರಾಗಿ ಸರ್ಕಾರಕ್ಕೆ ₹2.17 ಕೋಟಿ ನಷ್ಟವಾಗಿದೆ ಎಂದು ಉಲ್ಲೇಖಿಸಿದ್ದರು.</p>.<p>ಈ ಪ್ರಕರಣಗಳಲ್ಲಿ ಯಾವ ಅಧಿಕಾರಿಗಳ ಎಲ್ಲೆಲ್ಲಿ ಕರ್ತವ್ಯಲೋಪ ಎಸಗಿದ್ದಾರೆ. ಯಾರಿಂದ ಎಷ್ಟು ನಷ್ಟ ಆಗಿದೆ ಎಂದು ಕೂಲಂಕಷವಾಗಿ ಪರಿಶೀಲಿಸಿರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್, 8 ಸಿಬ್ಬಂದಿ ಅಮಾನತು ಮಾಡಿ ಆದೇಶಿಸಿದ್ದಾರೆ. ಶಿರಸ್ತೇದಾರ್ ಕಲ್ಮರುಡಪ್ಪ ಅವರನ್ನು ಈ ಹಿಂದೆಯೇ ಅಮಾನತು ಮಾಡಲಾಗಿತ್ತು. </p>.<p>‘ಆಕ್ರಮವಾಗಿ ಪಿಂಚಣಿ ಮಂಜೂರಾತಿ ಪ್ರಕರಣದಲ್ಲಿ ಸಿಬ್ಬಂದಿಯನ್ನು ಅಮಾನತು ಮಾಡಿರುವ ಕ್ರಮ ಸ್ವಾಗತಾರ್ಹ. ಎಲ್ಲಾ ತಾಲ್ಲೂಕು ಮತ್ತು ಹೋಬಳಿಗಳಲ್ಲಿ ಎನ್.ಕೆ.–4 ಮತ್ತು ಎನ್.ಕೆ.–5 ತಂತ್ರಾಂಶ ಪರಿಶೀಲಿಸಬೇಕು. ಅಕ್ರಮಗಳನ್ನು ಪತ್ತೆ ಹಚ್ಚಬೇಕು’ ಎಂದು ಕಡೂರಿನ ವಕೀಲ ನಾಗರಾಜ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಕಡೂರು ತಾಲ್ಲೂಕಿನಲ್ಲಿ ಮಧ್ಯ ವಯಸ್ಸಿನವರಿಗೆ ಅಕ್ರಮವಾಗಿ ವೃದ್ಧಾಪ್ಯ ವೇತನ ಮಂಜೂರು ಮಾಡಿರುವ ಆರೋಪದಲ್ಲಿ ಕಂದಾಯ ಇಲಾಖೆಯ ಎಂಟು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.</p>.<p>ನಾಡ ಕಚೇರಿ ವಿಷಯ ನಿರ್ವಾಹಕ ಗಿರೀಶ್, ಕಂದಾಯ ಅಧಿಕಾರಿ ಪಿ.ಆರ್.ರವಿಕುಮಾರ್, ಗ್ರಾಮ ಆಡಳಿತಾಧಿಕಾರಿಗಳಾದ ನಿರ್ಮಲಾ ಟಿ.ಎಸ್., ಹನುಮಂತಪ್ಪ ಆರ್., ರವಿ ಕೆ.ಆರ್., ಲಿಂಗರಾಜು ಕೆ.,ಕಾವ್ಯಾ ಟಿ.ಎಂ., ಕುಮಾರ್ ಜೆ.ಎಂ. ಅವರನ್ನು ಅಮಾನತು ಮಾಡಲಾಗಿದೆ.</p>.<p>ಎನ್.ಕೆ.(ನಾಡ ಕಚೇರಿ)–5 ತಂತ್ರಾಂಶದಲ್ಲಿ ಅಕ್ರಮವಾಗಿ 64 ಜನರಿಗೆ ಪಿಂಚಣಿ ಮಂಜೂರು ಮಾಡಿ ಸರ್ಕಾರಕ್ಕೆ ₹9.03 ಲಕ್ಷ ನಷ್ಟ ಮಾಡಿದ್ದಾರೆ ಎಂದು ತಹಶೀಲ್ದಾರ್ ವರದಿಯಲ್ಲಿ ತಿಳಿಸಿದ್ದರು. ಅದನ್ನು ಆಧರಿಸಿ ತನಿಖೆ ನಡೆಸಿದ್ದ ಕಂದಾಯ ಇಲಾಖೆ, 11 ಜನರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು.</p>.<p>ಕಡೂರು ತಹಶೀಲ್ದಾರ್ ಇತ್ತೀಚೆಗೆ ಮತ್ತೊಂದು ವರದಿಯನ್ನು ಸಲ್ಲಿಸಿದ್ದು, ಕಡೂರು ತಾಲ್ಲೂಕಿನ ಕಸಬಾ ಹೋಬಳಿಯಲ್ಲಿ ಎನ್.ಕೆ.–4 ತಂತ್ರಾಂಶದಲ್ಲೂ 1,485 ಅನರ್ಹರಿಗೆ ಅಕ್ರಮವಾಗಿ ಪಿಂಚಣಿ ಮಂಜೂರಾಗಿ ಸರ್ಕಾರಕ್ಕೆ ₹2.17 ಕೋಟಿ ನಷ್ಟವಾಗಿದೆ ಎಂದು ಉಲ್ಲೇಖಿಸಿದ್ದರು.</p>.<p>ಈ ಪ್ರಕರಣಗಳಲ್ಲಿ ಯಾವ ಅಧಿಕಾರಿಗಳ ಎಲ್ಲೆಲ್ಲಿ ಕರ್ತವ್ಯಲೋಪ ಎಸಗಿದ್ದಾರೆ. ಯಾರಿಂದ ಎಷ್ಟು ನಷ್ಟ ಆಗಿದೆ ಎಂದು ಕೂಲಂಕಷವಾಗಿ ಪರಿಶೀಲಿಸಿರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್, 8 ಸಿಬ್ಬಂದಿ ಅಮಾನತು ಮಾಡಿ ಆದೇಶಿಸಿದ್ದಾರೆ. ಶಿರಸ್ತೇದಾರ್ ಕಲ್ಮರುಡಪ್ಪ ಅವರನ್ನು ಈ ಹಿಂದೆಯೇ ಅಮಾನತು ಮಾಡಲಾಗಿತ್ತು. </p>.<p>‘ಆಕ್ರಮವಾಗಿ ಪಿಂಚಣಿ ಮಂಜೂರಾತಿ ಪ್ರಕರಣದಲ್ಲಿ ಸಿಬ್ಬಂದಿಯನ್ನು ಅಮಾನತು ಮಾಡಿರುವ ಕ್ರಮ ಸ್ವಾಗತಾರ್ಹ. ಎಲ್ಲಾ ತಾಲ್ಲೂಕು ಮತ್ತು ಹೋಬಳಿಗಳಲ್ಲಿ ಎನ್.ಕೆ.–4 ಮತ್ತು ಎನ್.ಕೆ.–5 ತಂತ್ರಾಂಶ ಪರಿಶೀಲಿಸಬೇಕು. ಅಕ್ರಮಗಳನ್ನು ಪತ್ತೆ ಹಚ್ಚಬೇಕು’ ಎಂದು ಕಡೂರಿನ ವಕೀಲ ನಾಗರಾಜ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>