<p><strong>ಚಿಕ್ಕಮಗಳೂರು</strong>: ಮೂಡಿಗೆರೆ ತಾಲ್ಲೂಕಿನ ಊರುಬಗೆ ಸಮೀಪ ಕಾಡಾನೆ ತಿವಿದು ಮೃತಪಟ್ಟ ಕಾರ್ಮಿಕ ಅರ್ಜುನ್ ಶವವನ್ನು ಶುಕ್ರವಾರ ಅರಣ್ಯ ಕಚೇರಿ ಮುಂದೆ ಇಟ್ಟು, ಕಚೇರಿ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು.</p>.<p>ಕಾರ್ಮಿಕನ ಸಾವಿಗೆ ಕಾರಣವಾದ ಆನೆಯನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ಪ್ರತಿಭಟನಾಕಾರರು ಮೂಡಿಗೆರೆ – ಬೇಲೂರು ರಸ್ತೆಯ ಅರಣ್ಯ ಕಚೇರಿ ಬಳಿ ಮಧ್ಯಾಹ್ನ ಜಮಾಯಿಸಿದರು. ಈ ಸಂದರ್ಭದಲ್ಲಿ ರಸ್ತೆಯಲ್ಲಿ ಕೆಲಕಾಲ ಸಂಚಾರ ಬಂದ್ ಆಗಿತ್ತು. ಸ್ಥಳೀಯರು, ರೈತ ಸಂಘ, ಬೆಳೆಗಾರರ ಸಂಘದವರು ಪಾಲ್ಗೊಂಡಿದ್ದರು. ಘೋಷಣೆಗಳನ್ನು ಕೂಗಿದರು. ಅರಣ್ಯ ಕಚೇರಿ ಆವರಣದ ಗೇಟು ತೆಗೆದು ಒಳಕ್ಕೆ ನುಗ್ಗಿದರು.</p>.<p>ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಮುಂದಾದರು. ಪರಸ್ಪರ ಮಾತಿನ ಚಕಮಕಿ ನಡೆಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.</p>.<p>ಪ್ರತಿಭಟನಾಕಾರರು ಕಚೇರಿಯೊಳಕ್ಕೆ ಮುತ್ತಿಗೆ ಹಾಕದಂತೆ ತಡೆಯಲು ಪೊಲೀಸರು ಅಡ್ಡಲಾಗಿ ವಾಹನ ನಿಲ್ಲಿಸಿದರು. ವಾಹನವನ್ನು ದಾಟಿಕೊಂಡು ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಪ್ರತಿಭಟನಾಕಾರರನ್ನು ಚದುರಿಸಿದರು.</p>.<p>ಸೆ. 8ರಂದು ಊರುಬಗೆಯ ಕಾರ್ಮಿಕ ಅರ್ಜುನ್ ಕೂಲಿ ಕಾಯಕ ಮುಗಿಸಿ ಸಂಜೆ ಮನೆಗೆ ವಾಪಸಾಗುವಾಗ ಕಾಡಾನೆ ಅಟ್ಟಿಸಿಕೊಂಡು ಹೋಗಿ ತುಳಿದು ಹೊಸಕಿ ಹಾಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಮೂಡಿಗೆರೆ ತಾಲ್ಲೂಕಿನ ಊರುಬಗೆ ಸಮೀಪ ಕಾಡಾನೆ ತಿವಿದು ಮೃತಪಟ್ಟ ಕಾರ್ಮಿಕ ಅರ್ಜುನ್ ಶವವನ್ನು ಶುಕ್ರವಾರ ಅರಣ್ಯ ಕಚೇರಿ ಮುಂದೆ ಇಟ್ಟು, ಕಚೇರಿ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು.</p>.<p>ಕಾರ್ಮಿಕನ ಸಾವಿಗೆ ಕಾರಣವಾದ ಆನೆಯನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ಪ್ರತಿಭಟನಾಕಾರರು ಮೂಡಿಗೆರೆ – ಬೇಲೂರು ರಸ್ತೆಯ ಅರಣ್ಯ ಕಚೇರಿ ಬಳಿ ಮಧ್ಯಾಹ್ನ ಜಮಾಯಿಸಿದರು. ಈ ಸಂದರ್ಭದಲ್ಲಿ ರಸ್ತೆಯಲ್ಲಿ ಕೆಲಕಾಲ ಸಂಚಾರ ಬಂದ್ ಆಗಿತ್ತು. ಸ್ಥಳೀಯರು, ರೈತ ಸಂಘ, ಬೆಳೆಗಾರರ ಸಂಘದವರು ಪಾಲ್ಗೊಂಡಿದ್ದರು. ಘೋಷಣೆಗಳನ್ನು ಕೂಗಿದರು. ಅರಣ್ಯ ಕಚೇರಿ ಆವರಣದ ಗೇಟು ತೆಗೆದು ಒಳಕ್ಕೆ ನುಗ್ಗಿದರು.</p>.<p>ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಮುಂದಾದರು. ಪರಸ್ಪರ ಮಾತಿನ ಚಕಮಕಿ ನಡೆಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.</p>.<p>ಪ್ರತಿಭಟನಾಕಾರರು ಕಚೇರಿಯೊಳಕ್ಕೆ ಮುತ್ತಿಗೆ ಹಾಕದಂತೆ ತಡೆಯಲು ಪೊಲೀಸರು ಅಡ್ಡಲಾಗಿ ವಾಹನ ನಿಲ್ಲಿಸಿದರು. ವಾಹನವನ್ನು ದಾಟಿಕೊಂಡು ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಪ್ರತಿಭಟನಾಕಾರರನ್ನು ಚದುರಿಸಿದರು.</p>.<p>ಸೆ. 8ರಂದು ಊರುಬಗೆಯ ಕಾರ್ಮಿಕ ಅರ್ಜುನ್ ಕೂಲಿ ಕಾಯಕ ಮುಗಿಸಿ ಸಂಜೆ ಮನೆಗೆ ವಾಪಸಾಗುವಾಗ ಕಾಡಾನೆ ಅಟ್ಟಿಸಿಕೊಂಡು ಹೋಗಿ ತುಳಿದು ಹೊಸಕಿ ಹಾಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>