ಕೊಟ್ಟಿಗೆಹಾರ: ಮಂಗಳೂರಿನಿಂದ ಅಜ್ಜಂಪುರಕ್ಕೆ ಪೆಟ್ರೋಲ್ ತುಂಬಿಸಿಕೊಂಡು ಸಾಗುತ್ತಿದ್ದ ಟ್ಯಾಂಕರ್ ಕೊಟ್ಟಿಗೆಹಾರ ಬಣಕಲ್ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ವಾಲಿದ್ದು ದೊಡ್ಡ ದುರಂತ ತಪ್ಪಿದಂತಾಗಿದೆ.
ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದ್ದರೆ ಸಾವಿರಾರು ಲೀಟರ್ ಪೆಟ್ರೋಲ್ ಸುರಿದು ದುರಂತವೇ ನಡೆದು ಹೋಗುತ್ತಿತ್ತು. ಸದ್ಯ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ದಿಣ್ಣೆಗೆ ವಾಲಿ ನಿಂತಿದ್ದು ಯಾವುದೇ ಹಾನಿ ಸಂಭವಿಸಿಲ್ಲ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.