<p><strong>ಕಳಸ:</strong> ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ಭದ್ರಾನದಿಗೆ ಗುರುವಾರ ಮಧ್ಯಾಹ್ನ ಪಿಕ್ಅಪ್ ವಾಹನ ಬಿದ್ದಿದ್ದು, ಯುವಕನೊಬ್ಬ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ.</p>.<p>ಗಣಪತಿಕಟ್ಟೆಯ ರಮೇಶ ಮತ್ತು ರವಿಕಲಾ ದಂಪತಿಯ ಮಗ ಶಮಂತ (22) ಗುರುವಾರ ಮಧ್ಯಾಹ್ನ 3ರ ವೇಳೆಗೆ ಕಳಕೋಡಿನಿಂದ ತೋಟದ ಕಾರ್ಮಿಕರನ್ನು ಕಳಸಕ್ಕೆ ಕರೆತರಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. </p>.<p>ಅತಿವೇಗದಲ್ಲಿ ಹೋದ ಪಿಕ್ಅಪ್ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಂಬ ಮೂರು ತುಂಡುಗಳಾಗಿ ಬಿದ್ದಿದ್ದು, ವಾಹನ ಭದ್ರಾನದಿಗೆ ಉರುಳಿರುವ ಶಂಕೆ ಇದೆ.</p>.<p>ನದಿಯಲ್ಲಿ 20 ಅಡಿಗೂ ಹೆಚ್ಚು ನೀರು ಹರಿಯುತ್ತಿದ್ದು, ವಾಹನ ಕಾಣುತ್ತಿಲ್ಲ. ವಾಹನ ಚಲಾಯಿಸುತ್ತಿದ್ದ ಶಮಂತ ವಾಹನದಲ್ಲೇ ಸಿಲುಕಿರಬೇಕು ಎಂದು ಶಂಕಿಸಲಾಗಿದೆ.</p>.<p>ಸ್ಥಳಕ್ಕೆ ಜನರು ಧಾವಿಸಿದ್ದು, ಕಳಸ ಪೊಲೀಸರು ಅಗತ್ಯ ಕ್ರಮ ವಹಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬಂದ ನಂತರ ಶವ ಪತ್ತೆಗೆ ಪ್ರಯತ್ನ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಳಸ:</strong> ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ಭದ್ರಾನದಿಗೆ ಗುರುವಾರ ಮಧ್ಯಾಹ್ನ ಪಿಕ್ಅಪ್ ವಾಹನ ಬಿದ್ದಿದ್ದು, ಯುವಕನೊಬ್ಬ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ.</p>.<p>ಗಣಪತಿಕಟ್ಟೆಯ ರಮೇಶ ಮತ್ತು ರವಿಕಲಾ ದಂಪತಿಯ ಮಗ ಶಮಂತ (22) ಗುರುವಾರ ಮಧ್ಯಾಹ್ನ 3ರ ವೇಳೆಗೆ ಕಳಕೋಡಿನಿಂದ ತೋಟದ ಕಾರ್ಮಿಕರನ್ನು ಕಳಸಕ್ಕೆ ಕರೆತರಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. </p>.<p>ಅತಿವೇಗದಲ್ಲಿ ಹೋದ ಪಿಕ್ಅಪ್ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಂಬ ಮೂರು ತುಂಡುಗಳಾಗಿ ಬಿದ್ದಿದ್ದು, ವಾಹನ ಭದ್ರಾನದಿಗೆ ಉರುಳಿರುವ ಶಂಕೆ ಇದೆ.</p>.<p>ನದಿಯಲ್ಲಿ 20 ಅಡಿಗೂ ಹೆಚ್ಚು ನೀರು ಹರಿಯುತ್ತಿದ್ದು, ವಾಹನ ಕಾಣುತ್ತಿಲ್ಲ. ವಾಹನ ಚಲಾಯಿಸುತ್ತಿದ್ದ ಶಮಂತ ವಾಹನದಲ್ಲೇ ಸಿಲುಕಿರಬೇಕು ಎಂದು ಶಂಕಿಸಲಾಗಿದೆ.</p>.<p>ಸ್ಥಳಕ್ಕೆ ಜನರು ಧಾವಿಸಿದ್ದು, ಕಳಸ ಪೊಲೀಸರು ಅಗತ್ಯ ಕ್ರಮ ವಹಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬಂದ ನಂತರ ಶವ ಪತ್ತೆಗೆ ಪ್ರಯತ್ನ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>