‘ದುರಸ್ತಿಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಂದ ಪಟ್ಟಣ ಪಂಚಾಯಿತಿ ಅನುಮತಿ ಪಡೆದಿಲ್ಲ’ ಎಂದು ಸ್ಥಳೀಯರು ಆಕ್ಷೇಪಿಸಿದರು. ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಪ್ರತಿಭಟನಾಕಾರರಿಗೆ ಸ್ಪಷ್ಟನೆ ನೀಡಲು ಮುಂದಾದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಜಾತಾ, ಉಪಾಧ್ಯಕ್ಷೆ ಗಾಯತ್ರಿ ಶೆಟ್ಟಿ ಅವರನ್ನು ಜನರು ತರಾಟೆಗೆ ತೆಗೆದುಕೊಂಡರು. ಸ್ಥಳೀಯರಾದ ರಂಜಿತ್ ಶೆಟ್ಟಿ, ಸಿಗದಾಳು ಜಯೇಂದ್ರ, ಹರಿಹರಪುರ ಪೊಲೀಸ್ ಸಿಬ್ಬಂದಿ ಮೊದಲಾದವರು ಪಾಲ್ಗೊಂಡಿದ್ದರು.