ಕೆ.ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಎಂ.ಎಸ್.ಯೋಗೀಶ್ ಅವರ ತೋಟ ಎತ್ತರದ ಸ್ಥಳದಲ್ಲಿದೆ. ಒಂದೂವರೆ ವರ್ಷದ ಹಿಂದೆ ಈ ಜಮೀನಿನಲ್ಲಿ ತೆಂಗಿನ ಗಿಡ ನೆಟ್ಟಿದ್ದು, ಆ ಸಮಯದಲ್ಲಿ ಸುಮಾರು 8 ಅಡಿ ಅಗಲ ಮತ್ತು 3 ಅಡಿ ಆಳದ ಒಂದು ಗುಂಡಿ ತೆಗೆಯಲಾಗಿತ್ತು. ಆಗ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದರಿಂದ ಆ ಗುಂಡಿಯಲ್ಲಿ ನೀರು ತುಂಬಿ ಅದೇ ನೀರು ಗಿಡಗಳಿಗೆ ಆಸರೆಯಾಗಿತ್ತು.