<p><strong>ಚಿಕ್ಕಮಗಳೂರು</strong>: ಕೇಂದ್ರ ಸರ್ಕಾರದ ಪಿ.ಎಂ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯ ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಸುಮಾರು ₹12.5 ಕೋಟಿ ಸಾಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಹೇಶ್ ತಿಳಿಸಿದರು.</p>.<p>ನಗರದ ಬಸವನಹಳ್ಳಿ ಸಮೀಪದ ವಿಶ್ವಕರ್ಮ ಸಮುದಾಯ ಭವನದಲ್ಲಿ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ (ಎಂಎಸ್ಎಂಇ) ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ವತಿಯಿಂದ ಏರ್ಪಡಿಸಿದ್ದ ಪಿ.ಎಂ ವಿಶ್ವಕರ್ಮ ಯೋಜನೆ ಕಾರ್ಯಾಗಾರವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪೂರ್ವಿಕರ 18ಕ್ಕೂ ಹೆಚ್ಚು ಮೂಲ ಕಸುಬು ಮಾಡಿಕೊಂಡು ಬಂದಿರುವ ಸಮುದಾಯಗಳಿಗೆ ಆರ್ಥಿಕ ಸಹಾಯಹಸ್ತ ಇರಲಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲಿಸಿ ಮೂಲ ಕಸುಬು ಉಳಿಸಲು ವಿಶ್ವಕರ್ಮ ಯೋಜನೆ ಜಾರಿಗೆ ತಂದಿದೆ. ತರಬೇತಿ ನಂತರ ಆರ್ಥಿಕ ಸಹಾಯ ಧನ ಒದಗಿಸುತ್ತಿದೆ ಎಂದರು.</p>.<p>ಮೂಲ ಕಸುಬುದಾರರು ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹರಿಗೆ ತರಬೇತಿ ನೀಡಿ ಪ್ರಮಾಣ ಪತ್ರ ವಿತರಿಸಲಾಗುವುದು. ನಂತರ ಬ್ಯಾಂಕ್ನಿಂದ ವಾರ್ಷಿಕ ಶೇ 5ರ ಬಡ್ಡಿದರದಲ್ಲಿ ₹50 ಸಾವಿರದಿಂದ ₹2 ಲಕ್ಷದವರೆಗೆ ಕಸುಬಿನ ಪರಿಕರ ಖರೀದಿಸಲು ಸಾಲದ ರೂಪದಲ್ಲಿ ವಿತರಿಸುವ ಯೋಜನೆ ಇದಾಗಿದೆ ಎಂದು ತಿಳಿಸಿದರು.</p>.<p>ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸುವವರು ಕೇಂದ್ರದ ಮುದ್ರಾ ಸೇರಿದಂತೆ ಯಾವುದೇ ಯೋಜನೆಯಲ್ಲಿ ಸಾಲ ಪಡೆದಿರಬಾರದು. ಸರ್ಕಾರಿ ಹುದ್ದೆ ಹೊಂದಿರುವ ವ್ಯಕ್ತಿಗೆ ಸೌಲಭ್ಯ ಲಭಿಸುವುದಿಲ್ಲ. ಸಾಲ ಪಡೆದುಕೊಂಡ ಫಲಾನುಭವಿಗಳು ಸಮಯಕ್ಕೆ ಮರುಪಾವತಿ ಮಾಡಿದರೆ ಹೆಚ್ಚಿನ ಮೊತ್ತದಲ್ಲಿ ಸಾಲ ದೊರಕಲಿದೆ ಎಂದರು.</p>.<p>ಎಂಎಸ್ಎಂಇ ಸಹಾಯಕ ನಿರ್ದೇಶಕ ಜಿ.ನಾಗರಾಜ್ ಮಾತನಾಡಿ, ವಿಶ್ವಕರ್ಮ ಯೋಜನೆಯಲ್ಲಿ ಫಲಾನುಭವಿಗಳಿಗೆ ಯಾವುದೇ ಭದ್ರತೆ ಇಲ್ಲದೆ ಸಾಲ ನೀಡಲಾಗುತ್ತಿದೆ ಎಂದರು.</p>.<p>ಪಿಎಂವಿ ಯೋಜನೆ ಜಿಲ್ಲಾ ಸದಸ್ಯ ರವೀಂದ್ರ ಬೆಳವಾಡಿ ಮಾತನಾಡಿ, ‘ಮೂಲಕಸಬು ಉಳಿಸಲು ಕೇಂದ್ರ ಸರ್ಕಾರ ವಿಶ್ವಕರ್ಮ ಯೋಜನೆ ಅನುಷ್ಠಾನಗೊಳಿಸಿದೆ. ಆದರೆ, ಕೆಲವು ಬ್ಯಾಂಕ್ಗಳು ಆರಂಭದಲ್ಲಿ ₹1 ಲಕ್ಷ ಸಾಲ ವಿತರಿಸುವ ಬದಲಾಗಿ, ಕೇವಲ ₹50 ಸಾವಿರ ಸಾಲ ವಿತರಿಸುತ್ತಿರುವುದು ಸರಿಯಲ್ಲ. ಕೇಂದ್ರ ಸರ್ಕಾರದ ಆದೇಶವನ್ನು ಬ್ಯಾಂಕ್ಗಳು ಪಾಲಿಸಬೇಕು’ ಎಂದು ಹೇಳಿದರು.</p>.<p>ಎಂಎಸ್ಎಂಇ ಜಂಟಿ ನಿರ್ದೇಶಕ ಎಂ.ಶಶಿಕುಮಾರ್ ಮಾತನಾಡಿ, ‘ದೇಶದಾದ್ಯಂತ ಮೂಲ ಕಸುಬುದಾರರ ಜೀವನ ಸುಧಾರಿಸಲು ಕೇಂದ್ರ ಸರ್ಕಾರ ₹13 ಸಾವಿರ ಕೋಟಿಯನ್ನು ಯೋಜನೆಗೆ ಮೀಸಲಿಟ್ಟಿದೆ’ ಎಂದರು.</p>.<p>ಕಾರ್ಯಗಾರದಲ್ಲಿ ಪಿಎಂವಿ ಯೋಜನೆ ಜಿಲ್ಲಾ ಸದಸ್ಯ ಸಂತೋಷ್ ಕೋಟ್ಯಾನ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಮಹೇಶ್, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಪ್ರಶಾಂತ್, ಸಿಎಸ್ಸಿ ಜಿಲ್ಲಾ ಸಂಯೋಜಕ ವಿಜಯಕುಮಾರ್, ಡಿಪಿಎಂಯು ರಾಕೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಕೇಂದ್ರ ಸರ್ಕಾರದ ಪಿ.ಎಂ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯ ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಸುಮಾರು ₹12.5 ಕೋಟಿ ಸಾಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಹೇಶ್ ತಿಳಿಸಿದರು.</p>.<p>ನಗರದ ಬಸವನಹಳ್ಳಿ ಸಮೀಪದ ವಿಶ್ವಕರ್ಮ ಸಮುದಾಯ ಭವನದಲ್ಲಿ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ (ಎಂಎಸ್ಎಂಇ) ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ವತಿಯಿಂದ ಏರ್ಪಡಿಸಿದ್ದ ಪಿ.ಎಂ ವಿಶ್ವಕರ್ಮ ಯೋಜನೆ ಕಾರ್ಯಾಗಾರವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪೂರ್ವಿಕರ 18ಕ್ಕೂ ಹೆಚ್ಚು ಮೂಲ ಕಸುಬು ಮಾಡಿಕೊಂಡು ಬಂದಿರುವ ಸಮುದಾಯಗಳಿಗೆ ಆರ್ಥಿಕ ಸಹಾಯಹಸ್ತ ಇರಲಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲಿಸಿ ಮೂಲ ಕಸುಬು ಉಳಿಸಲು ವಿಶ್ವಕರ್ಮ ಯೋಜನೆ ಜಾರಿಗೆ ತಂದಿದೆ. ತರಬೇತಿ ನಂತರ ಆರ್ಥಿಕ ಸಹಾಯ ಧನ ಒದಗಿಸುತ್ತಿದೆ ಎಂದರು.</p>.<p>ಮೂಲ ಕಸುಬುದಾರರು ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹರಿಗೆ ತರಬೇತಿ ನೀಡಿ ಪ್ರಮಾಣ ಪತ್ರ ವಿತರಿಸಲಾಗುವುದು. ನಂತರ ಬ್ಯಾಂಕ್ನಿಂದ ವಾರ್ಷಿಕ ಶೇ 5ರ ಬಡ್ಡಿದರದಲ್ಲಿ ₹50 ಸಾವಿರದಿಂದ ₹2 ಲಕ್ಷದವರೆಗೆ ಕಸುಬಿನ ಪರಿಕರ ಖರೀದಿಸಲು ಸಾಲದ ರೂಪದಲ್ಲಿ ವಿತರಿಸುವ ಯೋಜನೆ ಇದಾಗಿದೆ ಎಂದು ತಿಳಿಸಿದರು.</p>.<p>ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸುವವರು ಕೇಂದ್ರದ ಮುದ್ರಾ ಸೇರಿದಂತೆ ಯಾವುದೇ ಯೋಜನೆಯಲ್ಲಿ ಸಾಲ ಪಡೆದಿರಬಾರದು. ಸರ್ಕಾರಿ ಹುದ್ದೆ ಹೊಂದಿರುವ ವ್ಯಕ್ತಿಗೆ ಸೌಲಭ್ಯ ಲಭಿಸುವುದಿಲ್ಲ. ಸಾಲ ಪಡೆದುಕೊಂಡ ಫಲಾನುಭವಿಗಳು ಸಮಯಕ್ಕೆ ಮರುಪಾವತಿ ಮಾಡಿದರೆ ಹೆಚ್ಚಿನ ಮೊತ್ತದಲ್ಲಿ ಸಾಲ ದೊರಕಲಿದೆ ಎಂದರು.</p>.<p>ಎಂಎಸ್ಎಂಇ ಸಹಾಯಕ ನಿರ್ದೇಶಕ ಜಿ.ನಾಗರಾಜ್ ಮಾತನಾಡಿ, ವಿಶ್ವಕರ್ಮ ಯೋಜನೆಯಲ್ಲಿ ಫಲಾನುಭವಿಗಳಿಗೆ ಯಾವುದೇ ಭದ್ರತೆ ಇಲ್ಲದೆ ಸಾಲ ನೀಡಲಾಗುತ್ತಿದೆ ಎಂದರು.</p>.<p>ಪಿಎಂವಿ ಯೋಜನೆ ಜಿಲ್ಲಾ ಸದಸ್ಯ ರವೀಂದ್ರ ಬೆಳವಾಡಿ ಮಾತನಾಡಿ, ‘ಮೂಲಕಸಬು ಉಳಿಸಲು ಕೇಂದ್ರ ಸರ್ಕಾರ ವಿಶ್ವಕರ್ಮ ಯೋಜನೆ ಅನುಷ್ಠಾನಗೊಳಿಸಿದೆ. ಆದರೆ, ಕೆಲವು ಬ್ಯಾಂಕ್ಗಳು ಆರಂಭದಲ್ಲಿ ₹1 ಲಕ್ಷ ಸಾಲ ವಿತರಿಸುವ ಬದಲಾಗಿ, ಕೇವಲ ₹50 ಸಾವಿರ ಸಾಲ ವಿತರಿಸುತ್ತಿರುವುದು ಸರಿಯಲ್ಲ. ಕೇಂದ್ರ ಸರ್ಕಾರದ ಆದೇಶವನ್ನು ಬ್ಯಾಂಕ್ಗಳು ಪಾಲಿಸಬೇಕು’ ಎಂದು ಹೇಳಿದರು.</p>.<p>ಎಂಎಸ್ಎಂಇ ಜಂಟಿ ನಿರ್ದೇಶಕ ಎಂ.ಶಶಿಕುಮಾರ್ ಮಾತನಾಡಿ, ‘ದೇಶದಾದ್ಯಂತ ಮೂಲ ಕಸುಬುದಾರರ ಜೀವನ ಸುಧಾರಿಸಲು ಕೇಂದ್ರ ಸರ್ಕಾರ ₹13 ಸಾವಿರ ಕೋಟಿಯನ್ನು ಯೋಜನೆಗೆ ಮೀಸಲಿಟ್ಟಿದೆ’ ಎಂದರು.</p>.<p>ಕಾರ್ಯಗಾರದಲ್ಲಿ ಪಿಎಂವಿ ಯೋಜನೆ ಜಿಲ್ಲಾ ಸದಸ್ಯ ಸಂತೋಷ್ ಕೋಟ್ಯಾನ್, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಮಹೇಶ್, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಪ್ರಶಾಂತ್, ಸಿಎಸ್ಸಿ ಜಿಲ್ಲಾ ಸಂಯೋಜಕ ವಿಜಯಕುಮಾರ್, ಡಿಪಿಎಂಯು ರಾಕೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>