ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಯೋಗೀಶ್ (32) ಶುಕ್ರವಾರ ನಸುಕಿನಲ್ಲಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಠಾಣೆಯ ವಿಶ್ರಾಂತಿ ಕೋಣೆಯಲ್ಲಿ ರಾತ್ರಿ 3 ಗಂಟೆ ಹೊತ್ತಿನಲ್ಲಿ ಕುಸಿದುಬಿದ್ದು ಒದ್ದಾಡುತ್ತಿದ್ದ ಯೋಗೀಶ್ ಅವರನ್ನು ಸಹೋದ್ಯೋಗಿಗಳು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮಾತ್ರೆ ಅಥವಾ ವಿಷ ಸೇವಿಸಿರಬಹುದು ಎಂದು ಶಂಕಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಅವರು ಠಾಣೆಗೆ ಭೇಟಿ ನೀಡಿದ್ದಾರೆ.