<p><strong>ಮೂಲ್ಕಿ: ಎ</strong>ರಡು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಲು ಹೋದಾಗ ಮನೆಯವರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ದೂರು– ಪ್ರತಿದೂರು ದಾಖಲಾಗಿದೆ.</p>.<p>ಎರಡು ಪ್ರಕರಣಕ್ಕೆ ಬೇಕಾಗಿದ್ದ ಆರೋಪಿ ಅನ್ಸಾರ್ (20) ಎಂಬಾತನಿಗೆ ನೋಟಿಸ್ ಜಾರಿ ಮಾಡಲು ಮುಲ್ಕಿ ಪೊಲೀಸರು ಕೆ.ಎಸ್.ರಾವ್ ನಗರದ ಮಸೀದಿ ಬಳಿಯ ಆರೋಪಿಯ ಸಂಬಂಧಿಕರ ಮನೆಗೆ ಬರುತ್ತಿದ್ದಂತೆ ಮನೆಮಂದಿ ಬಾಗಿಲನ್ನು ಮುಚ್ಚಿದ್ದಾರೆ ಎನ್ನಲಾಗಿದೆ.</p>.<p>ಈ ಸಂದರ್ಭ ಪೊಲೀಸರು ಎಚ್ಚರಿಕೆಗಳನ್ನು ನೀಡಿದರೂ ಮನೆಮಂದಿ ಜಗ್ಗದ ಕಾರಣ, ಬಾಗಿಲು ಒಡೆದು ಪೊಲೀಸರು ಒಳಗೆ ಪ್ರವೇಶ ಮಾಡಿದ್ದಾರೆ. ಈ ವೇಳೆ ಮನೆಮಂದಿಗೆ ಹಾಗೂ ಮೂಲ್ಕಿ ಪೊಲೀಸರಿಗೂ ನೂಕಾಟ ತಳ್ಳಾಟ ನಡೆದಿದೆ. ಈ ನಡುವೆ ಆರೋಪಿಯು ಕತ್ತಿಯಿಂದ ಮೂಲ್ಕಿ ಎಎಸ್ಐ ಅಶೋಕ ಅವರಿಗೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಅಶೋಕ ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>‘ಮನೆಯ ಒಳಗೆ ಆರೋಪಿಗಳಾದ ಅನ್ಸಾರ್, ಸಾದಿಕ್, ಮತ್ತಿಬ್ಬರು ಮಹಿಳೆಯರು ಸೇರಿ ನನ್ನ ಕುತ್ತಿಗೆ ಹಿಡಿದು, ಕತ್ತಿಯಿಂದ ಕೈಗೆ ಹಲ್ಲೆ ನಡೆಸಲಾಗಿದೆ ಅವಾಚ್ಯ ಶಬ್ದ ಪ್ರಯೋಗಿಸಿ, ಜೀವ ಬೆದರಿಕೆ ಹಾಕಲಾಗಿದೆ’ ಎಂದು ಅಶೋಕ ಮೂಲ್ಕಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ಅನ್ಸಾರ್ನ ದೊಡ್ಡಮ್ಮ ಮುಮ್ತಾಜ್ ಅವರು ಎಎಸ್ಐ ಅಶೋಕ್ ಆರೋಪವನ್ನು ನಿರಾಕರಿಸಿದ್ದು, ‘ತಮ್ಮ ಮೇಲೆ ಮೂಲ್ಕಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.</p>.<p>ಚಾಕು ಇರಿತದಿಂದ ಗಾಯಗೊಂಡಿರುವ ಅನ್ಸಾರ್ನನ್ನು ಮುಕ್ಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಅನ್ಸಾರ್ ತಂದೆ ಸಾದಿಕ್, ದೊಡ್ಡಮ್ಮ ಮುಮ್ತಾಜ್ ಮೂಲ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆರೋಪ-ಪ್ರತ್ಯಾರೋಪಗಳ ಬಗ್ಗೆ ಮೂಲ್ಕಿ ಠಾಣೆಗೆ ದೂರು ನೀಡಲಾಗಿದೆ.</p>.<p>ಪಣಂಬೂರು ಎಸಿಪಿ ಮಹೇಶ್ ಕುಮಾರ್, ಇನ್ಸ್ಪೆಕ್ಟರ್ ಅಜ್ಮತ್ ಆಲಿ, ಸುರತ್ಕಲ್ ಇನ್ಸ್ಪೆಕ್ಟರ್ ಚಂದ್ರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p class="Briefhead"><strong>ಗಾಯಾಳು ಚೇತರಿಕೆ</strong></p>.<p><strong>ಬಂಟ್ವಾಳ:</strong> ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಅಜ್ಜಿಬೆಟ್ಟು ತಿರುವು ಬಳಿ ಚಾಕು ಇರಿತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನೋಜ್ ಗಾಣಿಗ ಚೇತರಿಸಿಕೊಂಡು ಗುರುವಾರ ಬಿಡುಗಡೆಯಾಗಿದ್ದಾರೆ.</p>.<p>ಈ ಮಧ್ಯೆ ಎಸ್ಪಿ ಋಷಿಕೇಶಿ ಭಗವಾನ್ ಸೋನವಾನೆ ಅವರನ್ನು ಗಾಯಾಳು ತಂದೆ ಭೋಜ ಸಪಲ್ಯ ಬ್ರಹ್ಮರಕೂಟ್ಲು ಬುಧವಾರ ಭೇಟಿಯಾಗಿ, ತ್ವರಿತವಾಗಿ ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಲ್ಕಿ: ಎ</strong>ರಡು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಲು ಹೋದಾಗ ಮನೆಯವರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ದೂರು– ಪ್ರತಿದೂರು ದಾಖಲಾಗಿದೆ.</p>.<p>ಎರಡು ಪ್ರಕರಣಕ್ಕೆ ಬೇಕಾಗಿದ್ದ ಆರೋಪಿ ಅನ್ಸಾರ್ (20) ಎಂಬಾತನಿಗೆ ನೋಟಿಸ್ ಜಾರಿ ಮಾಡಲು ಮುಲ್ಕಿ ಪೊಲೀಸರು ಕೆ.ಎಸ್.ರಾವ್ ನಗರದ ಮಸೀದಿ ಬಳಿಯ ಆರೋಪಿಯ ಸಂಬಂಧಿಕರ ಮನೆಗೆ ಬರುತ್ತಿದ್ದಂತೆ ಮನೆಮಂದಿ ಬಾಗಿಲನ್ನು ಮುಚ್ಚಿದ್ದಾರೆ ಎನ್ನಲಾಗಿದೆ.</p>.<p>ಈ ಸಂದರ್ಭ ಪೊಲೀಸರು ಎಚ್ಚರಿಕೆಗಳನ್ನು ನೀಡಿದರೂ ಮನೆಮಂದಿ ಜಗ್ಗದ ಕಾರಣ, ಬಾಗಿಲು ಒಡೆದು ಪೊಲೀಸರು ಒಳಗೆ ಪ್ರವೇಶ ಮಾಡಿದ್ದಾರೆ. ಈ ವೇಳೆ ಮನೆಮಂದಿಗೆ ಹಾಗೂ ಮೂಲ್ಕಿ ಪೊಲೀಸರಿಗೂ ನೂಕಾಟ ತಳ್ಳಾಟ ನಡೆದಿದೆ. ಈ ನಡುವೆ ಆರೋಪಿಯು ಕತ್ತಿಯಿಂದ ಮೂಲ್ಕಿ ಎಎಸ್ಐ ಅಶೋಕ ಅವರಿಗೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಅಶೋಕ ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>‘ಮನೆಯ ಒಳಗೆ ಆರೋಪಿಗಳಾದ ಅನ್ಸಾರ್, ಸಾದಿಕ್, ಮತ್ತಿಬ್ಬರು ಮಹಿಳೆಯರು ಸೇರಿ ನನ್ನ ಕುತ್ತಿಗೆ ಹಿಡಿದು, ಕತ್ತಿಯಿಂದ ಕೈಗೆ ಹಲ್ಲೆ ನಡೆಸಲಾಗಿದೆ ಅವಾಚ್ಯ ಶಬ್ದ ಪ್ರಯೋಗಿಸಿ, ಜೀವ ಬೆದರಿಕೆ ಹಾಕಲಾಗಿದೆ’ ಎಂದು ಅಶೋಕ ಮೂಲ್ಕಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ಅನ್ಸಾರ್ನ ದೊಡ್ಡಮ್ಮ ಮುಮ್ತಾಜ್ ಅವರು ಎಎಸ್ಐ ಅಶೋಕ್ ಆರೋಪವನ್ನು ನಿರಾಕರಿಸಿದ್ದು, ‘ತಮ್ಮ ಮೇಲೆ ಮೂಲ್ಕಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.</p>.<p>ಚಾಕು ಇರಿತದಿಂದ ಗಾಯಗೊಂಡಿರುವ ಅನ್ಸಾರ್ನನ್ನು ಮುಕ್ಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಅನ್ಸಾರ್ ತಂದೆ ಸಾದಿಕ್, ದೊಡ್ಡಮ್ಮ ಮುಮ್ತಾಜ್ ಮೂಲ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆರೋಪ-ಪ್ರತ್ಯಾರೋಪಗಳ ಬಗ್ಗೆ ಮೂಲ್ಕಿ ಠಾಣೆಗೆ ದೂರು ನೀಡಲಾಗಿದೆ.</p>.<p>ಪಣಂಬೂರು ಎಸಿಪಿ ಮಹೇಶ್ ಕುಮಾರ್, ಇನ್ಸ್ಪೆಕ್ಟರ್ ಅಜ್ಮತ್ ಆಲಿ, ಸುರತ್ಕಲ್ ಇನ್ಸ್ಪೆಕ್ಟರ್ ಚಂದ್ರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p class="Briefhead"><strong>ಗಾಯಾಳು ಚೇತರಿಕೆ</strong></p>.<p><strong>ಬಂಟ್ವಾಳ:</strong> ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಅಜ್ಜಿಬೆಟ್ಟು ತಿರುವು ಬಳಿ ಚಾಕು ಇರಿತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನೋಜ್ ಗಾಣಿಗ ಚೇತರಿಸಿಕೊಂಡು ಗುರುವಾರ ಬಿಡುಗಡೆಯಾಗಿದ್ದಾರೆ.</p>.<p>ಈ ಮಧ್ಯೆ ಎಸ್ಪಿ ಋಷಿಕೇಶಿ ಭಗವಾನ್ ಸೋನವಾನೆ ಅವರನ್ನು ಗಾಯಾಳು ತಂದೆ ಭೋಜ ಸಪಲ್ಯ ಬ್ರಹ್ಮರಕೂಟ್ಲು ಬುಧವಾರ ಭೇಟಿಯಾಗಿ, ತ್ವರಿತವಾಗಿ ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>