ಜಿಲ್ಲಾ ಎಸ್ಪಿ ಎಂ.ಎಚ್.ಅಕ್ಷಯ್ ಇನ್ಸ್ಪೆಕ್ಟರ್ ವಸಂತ್ ಎಸ್. ಭಾಗವತ್ ಪಿಎಸ್ಐ ದಿಲೀಪ್ ಕುಮಾರ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ನ. 26ರಂದು ಪಟ್ಟಣದ ಬಸ್ ನಿಲ್ದಾಣದಲ್ಲಿದ್ದ ಮಹಮ್ಮದ್ ಹನೀಫ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಕಾನೂರು ಮತ್ತು ಹರಾವರಿ ಗ್ರಾಮಗಳ ಮನೆಗಳಿಂದ ಚಿನ್ನ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಕಳವಾಗಿದ್ದ ಚಿನ್ನವನ್ನು ಆರೋಪಿಯಿಂದ ವಶಪಡಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ನೀಡಲಾಗಿದೆ.