ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಜಿಲ್ಲೆಗಳಲ್ಲೂ ಈ ವ್ಯವಸ್ಥೆ ಜಾರಿಯಾಗಲಿದೆ. ‘ಒನ್ ನೇಷನ್– ಒನ್ ಹೆಲ್ಪ್ಲೈನ್’ ಪರಿಕಲ್ಪನೆ ಇದಾಗಿದೆ. ತುರ್ತು ಸಂದರ್ಭದಲ್ಲಿ 112 ಸಂಖ್ಯೆಗೆ ಕರೆ ಮಾಡಿ ಅಗ್ನಿಶಾಮಕ, ಪೊಲೀಸ್ ಸಹಿತ ವಿವಿಧ ವಿಭಾಗಗಳನ್ನು ಸಂಪರ್ಕಿಸುವ ವ್ಯವಸ್ಥೆ ಇದಾಗಿದೆ ಎಂದು ಹೇಳಿದರು.