<p><strong>ಶೃಂಗೇರಿ: </strong>ತಾಲ್ಲೂಕಿನ ಗಡಿಭಾಗದ ಮೂಲಕ ಹೊರ ಜಿಲ್ಲೆಗೆ ಅಕ್ರಮವಾಗಿ ಎರಡು ಪ್ರತ್ಯೇಕ ವಾಹನದಲ್ಲಿ ಸಾಗಣೆ ಮಾಡುತ್ತಿದ್ದ ಜಾನುವಾರನ್ನು ಬಜರಂಗದಳದ ಕಾರ್ಯಕರ್ತರ ಸಹಕಾರದೊಂದಿಗೆ ಪೊಲೀಸರು ಪತ್ತೆ ಹಚ್ಚಿ, ಪ್ರಕರಣ ದಾಖಲಿಸಿದ್ದಾರೆ.</p>.<p>ತನಿಕೋಡು ಚೆಕ್ಪೋಸ್ಟ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕ್ಯಾಂಟರ್ ಅನ್ನು ಪರಿಶೀಲಿಸಿದಾಗ ಅದರೊಳಗೆ ಅಕ್ರಮವಾಗಿ 20 ಜಾನು ವಾರನ್ನು ತುಂಬಿಸಲಾಗಿತ್ತು. ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.</p>.<p>ಇನ್ನೊಂದು ಪ್ರಕರಣದಲ್ಲಿ ಶೃಂಗೇರಿಯಿಂದ ಆಗುಂಬೆ ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ಅನ್ನು ಬಜರಂಗದಳದ ಕಾರ್ಯಕರ್ತರು ಅಡ್ಡಗಟ್ಟಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಪೊಲೀಸರು 18 ಜಾನುವಾರು, ಕ್ಯಾಂಟರ್ ಮತ್ತು ಮಾಲೀಕ ದಾವಣಗೆರೆಯ ಅಭಿದಾಲಿಕ್ನನ್ನು ವಶಕ್ಕೆ ಪಡೆದಿದ್ದಾರೆ.</p>.<p>ಒಟ್ಟು 34 ಎತ್ತು ಮತ್ತು 4 ಎಮ್ಮೆಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅದರಲ್ಲಿ 2 ಎತ್ತುಗಳು ವಾಹನದೊಳಗೆ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಚಾಲಕನಿಂದ ಪ್ರತಿದೂರು: ‘ನನ್ನ ಮೇಲೆ ಅಪರಿಚಿತರು ಹಲ್ಲೆ ಮಾಡಿ ₹ 22 ಸಾವಿರ ನಗದು ಮತ್ತು 2 ಮೊಬೈಲ್ ಅನ್ನು ದೋಚಿ ಪರಾರಿಯಾಗಿದ್ದಾರೆ’ ಎಂದು ಕ್ಯಾಂಟರ್ ಮಾಲೀಕ ಅಭಿದಾಲಿಕ್ ಪ್ರತಿ ದೂರು ನೀಡಿದ್ದಾರೆ.</p>.<p>ಪೊಲೀಸರು 3 ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಪ್ರಭಾರ ಡಿವೈಎಸ್ಪಿ ಡಿ.ಟಿ ಪ್ರಭು ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ: </strong>ತಾಲ್ಲೂಕಿನ ಗಡಿಭಾಗದ ಮೂಲಕ ಹೊರ ಜಿಲ್ಲೆಗೆ ಅಕ್ರಮವಾಗಿ ಎರಡು ಪ್ರತ್ಯೇಕ ವಾಹನದಲ್ಲಿ ಸಾಗಣೆ ಮಾಡುತ್ತಿದ್ದ ಜಾನುವಾರನ್ನು ಬಜರಂಗದಳದ ಕಾರ್ಯಕರ್ತರ ಸಹಕಾರದೊಂದಿಗೆ ಪೊಲೀಸರು ಪತ್ತೆ ಹಚ್ಚಿ, ಪ್ರಕರಣ ದಾಖಲಿಸಿದ್ದಾರೆ.</p>.<p>ತನಿಕೋಡು ಚೆಕ್ಪೋಸ್ಟ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕ್ಯಾಂಟರ್ ಅನ್ನು ಪರಿಶೀಲಿಸಿದಾಗ ಅದರೊಳಗೆ ಅಕ್ರಮವಾಗಿ 20 ಜಾನು ವಾರನ್ನು ತುಂಬಿಸಲಾಗಿತ್ತು. ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.</p>.<p>ಇನ್ನೊಂದು ಪ್ರಕರಣದಲ್ಲಿ ಶೃಂಗೇರಿಯಿಂದ ಆಗುಂಬೆ ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ಅನ್ನು ಬಜರಂಗದಳದ ಕಾರ್ಯಕರ್ತರು ಅಡ್ಡಗಟ್ಟಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಪೊಲೀಸರು 18 ಜಾನುವಾರು, ಕ್ಯಾಂಟರ್ ಮತ್ತು ಮಾಲೀಕ ದಾವಣಗೆರೆಯ ಅಭಿದಾಲಿಕ್ನನ್ನು ವಶಕ್ಕೆ ಪಡೆದಿದ್ದಾರೆ.</p>.<p>ಒಟ್ಟು 34 ಎತ್ತು ಮತ್ತು 4 ಎಮ್ಮೆಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅದರಲ್ಲಿ 2 ಎತ್ತುಗಳು ವಾಹನದೊಳಗೆ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಚಾಲಕನಿಂದ ಪ್ರತಿದೂರು: ‘ನನ್ನ ಮೇಲೆ ಅಪರಿಚಿತರು ಹಲ್ಲೆ ಮಾಡಿ ₹ 22 ಸಾವಿರ ನಗದು ಮತ್ತು 2 ಮೊಬೈಲ್ ಅನ್ನು ದೋಚಿ ಪರಾರಿಯಾಗಿದ್ದಾರೆ’ ಎಂದು ಕ್ಯಾಂಟರ್ ಮಾಲೀಕ ಅಭಿದಾಲಿಕ್ ಪ್ರತಿ ದೂರು ನೀಡಿದ್ದಾರೆ.</p>.<p>ಪೊಲೀಸರು 3 ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಪ್ರಭಾರ ಡಿವೈಎಸ್ಪಿ ಡಿ.ಟಿ ಪ್ರಭು ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>