ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ ಮಾತನಾಡಿ, ‘ಲೋಕಸಭೆ ಚುನಾವಣೆಯಲ್ಲಿ ಈಗಾಗಲೇ ಕೆಲವು ಪಕ್ಷಗಳು ಮತದಾರರಿಗೆ ಹಣ, ಮದ್ಯದ ಆಮಿಷ ನೀಡುತ್ತಿದ್ದಾರೆ. ಮತದಾರರು ಪ್ರಬುದ್ಧರಾಗಿ ಹಕ್ಕು ಚಲಾಯಿಸಬೇಕು. ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಬಹುಜನ ಪಕ್ಷವನ್ನು ಬೆಂಬಲಿಸುವಂತೆ ಕೋರಿದರು. ಪ್ರಚಾರದಲ್ಲಿ ಬಿಎಸ್ಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಕುಮಾರ್, ಪ್ರಧಾನ ಕಾರ್ಯದರ್ಶಿ ವಸಂತ್, ಖಜಾಂಚಿ ರತ್ನಾ, ಮುಖಂಡರಾದ ಪರಮೇಶ್, ಜಗದೀಶ್, ವಿಜಯ್ಕುಮಾರ್, ರವಿಕುಮಾರ್ ಪಾಲ್ಗೊಂಡಿದ್ದರು.