ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ ಮಾತನಾಡಿ, ‘ಹಣ ಮತ್ತು ರಾಜಕೀಯ ಅಧಿಕಾರದ ಅಮಲಿನಲ್ಲಿ ದುಷ್ಕೃತ್ಯ ಎಸಗಿರುವ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಬೇಕು. ದೇಶದಿಂದ ಗಡಿಪಾರು ಅಥವಾ ಗಲ್ಲುಶಿಕ್ಷೆ ವಿಧಿಸಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಕಲ್ಪಿಸಬೇಕು’ ಎಂದು ಆಗ್ರಹಿಸಿದರು. ಗೋಷ್ಠಿಯಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ಕುಮಾರ್, ಮುಖಂಡರಾದ ವಸಂತ್ಕುಮಾರ್, ಮಂಜುನಾಥ್, ವಿಜಯ್, ರತ್ನಾ, ಮಂಜುಳಾ ಪಾಲ್ಗೊಂಡಿದ್ದರು.