‘ಕಳಸ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ, ಕಳಸವನ್ನು ಯಾವಾಗ ಸಂಪೂರ್ಣ ತಾಲ್ಲೂಕನ್ನಾಗಿ ಪರಿವರ್ತಿಸುತ್ತೀರಿ ಎಂದು ಅನೇಕರು ಪ್ರಶ್ನಿಸಿದ್ದು, ಕೋವಿಡ್, ಪ್ರಾಕೃತಿಕ ವಿಕೋಪ ಕಾರಣಗಳಿಂದ ಸವಲತ್ತುಗಳನ್ನು ನೀಡಲು ತಡವಾಗಿದೆ. ಈ ಹಿಂದೆ ಕಳಸವನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡಬೇಕು ಎಂದು ನಮ್ಮ ಪಕ್ಷದ ವತಿಯಿಂದ ಹಲವಾರು ಹೋರಾಟಗಳನ್ನು ಮಾಡಿದ್ದೇವೆ. ಮೂಡಿಗೆರೆ ತಾಲ್ಲೂಕು ಕೇಂದ್ರಕ್ಕೆ ಕಳಸದ ಗಡಿಭಾಗದಿಂದ ಬರಲು 120 ಕಿ.ಮೀ ಆಗುತ್ತಿತ್ತು. ಇಂತಹ ಸಮಸ್ಯೆಯನ್ನು ತಪ್ಪಿಸಬೇಕು ಎಂಬುದು ನಮ್ಮ ನಿಲುವಾಗಿತ್ತು’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.