‘ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯದ 36 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಪ್ರವಾಸ ಮುಗಿಸಿದ್ದೇನೆಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ, ರಾಜ್ಯದ ಜಿಲ್ಲೆಗಳ ಸಂಖ್ಯೆ ಬಗ್ಗೆ ಜನರನ್ನು ಗೊಂದಲಕ್ಕೀಡು ಮಾಡಿದ್ದಾರೆ. ಸಂಘಟನಾತ್ಮಕ ಜಿಲ್ಲೆಗಳ ಕುರಿತು ಪಕ್ಷದ ಸಭೆಯಲ್ಲಿ ಮಾತಾಡಿಕೊಳ್ಳಬೇಕು. ಅದನ್ನು ಬಿಟ್ಟು ಜನರಿಗೆ ದಾರಿ ತಪ್ಪಿಸಬಾರದು’ ಎಂದು ಟೀಕಿಸಿದರು.
ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೇಟಿ ನೀಡಿ, ಜನರ ಸಮಸ್ಯೆ ಆಲಿಸಿದ್ದಾರೆ. ಆದರೆ ಜಿಲ್ಲೆಗೆ ಎರಡು ಬಾರಿ ಬೇಟಿ ನೀಡಿದ ನಳೀನ್ ಕುಮಾರ್ ಕಟೀಲ್ ಅವರು ಪಕ್ಷದ ಸಭೆಗಳಿಗೆ ಮಾತ್ರ ಸೀಮಿತರಾಗಿದ್ದಾರೆ. ಸ್ಥಳೀಯ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಗೋಜಿಗೆ ಹೋಗುತ್ತಿಲ್ಲ ಎಂದು ಲೇವಡಿ ಮಾಡಿದರು.