<p><strong>ಕಡೂರು</strong>: ‘ಗಡಿ ಗ್ರಾಮಗಳನ್ನು ನಿರ್ಲಕ್ಷ್ಯಿಸದೆ ಅಲ್ಲಿಯೂ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗಿದೆ’ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.</p>.<p>ಸೋಮವಾರ ತಾಲ್ಲೂಕಿನ ಅಂತರಘಟ್ಟೆ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಅಡಚಣೆಯಾಗಿದೆ ಎಂಬ ಆರೋಪಕ್ಕೆ ಅರ್ಥವೇ ಇಲ್ಲ. ಗ್ಯಾರಂಟಿ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಪ್ರತ್ಯೇಕವಾಗಿ ಬಜೆಟ್ನಲ್ಲಿ ಹಣ ಮೀಸಲಿರಿಸಲಾಗಿದೆ. ತಾಲ್ಲೂಕಿನಲ್ಲೂ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ’ ಎಂದರು.</p>.<p>ಗಡಿಯಿಂದ ಮಂಜುನಾಥಪುರ ತಾಂಡ್ಯಾದವರೆಗೆ ₹1.5 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಳ್ಳಿಗಳಲ್ಲಿ ಸಮುದಾಯ ಭವನಗಳ ನಿರ್ಮಾಣ, ದೇವಸ್ಥಾನ ಮತ್ತು ಸಿಸಿ ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ’ ಎಂದರು.</p>.<p>ಜಿಲ್ಲಾ ಕೆಡಿಪಿ ಸದಸ್ಯ ಗುಮ್ಮನಹಳ್ಳಿ ಅಶೋಕ್ ಮಾತನಾಡಿ, ‘ಶಾಸಕರು ಗಡಿ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಿದ್ದಾರೆ. ಇದರ ಜತೆಗೆ ಸಂಸದರ ಅನುದಾನವೂ ಗಡಿ ಗ್ರಾಮಗಳಿಗೆ ಲಭಿಸಿದರೆ ಅಭಿವೃದ್ಧಿಗೆ ಪೂರಕವಾಗುತ್ತದೆ’ ಎಂದರು.</p>.<p>ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆಸಂದಿ ಕಲ್ಲೇಶ್, ಅಂತರಘಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿಯಪ್ಪ, ಉಪಾಧ್ಯಕ್ಷೆ ಸವಿತಾ, ಸದಸ್ಯರಾದ ಆಂಜನಪ್ಪ, ಅರುಣ್ ಕುಮಾರ್, ಪಾರ್ವತಮ್ಮ, ಮುಖಂಡರಾದ ಹೂಲಿಹಳ್ಳಿ ರಮೇಶ್, ಹನುಮಂತಪ್ಪ, ಚಂದ್ರಪ್ಪ ಇದ್ದರು.</p>.<p>ಚಾಲನೆ ನೀಡಿದ ಕಾಮಗಾರಿಗಳ ವಿವರ</p>.<p>ಹಡಗಲು ಗ್ರಾಮದ ಸಾರ್ವಜನಿಕ ಸಮುದಾಯ ಭವನ ₹ 15 ಲಕ್ಷ</p>.<p>ಹೂಲಿಹಳ್ಳಿ ಗ್ರಾಮದ ಸಾರ್ವಜನಿಕ ಸಮುದಾಯ ಭವನ ₹ 10 ಲಕ್ಷ</p>.<p>ಮಾಳೇಗುತ್ತಿ ಗ್ರಾಮದ ಸಾರ್ವಜನಿಕ ಸಮುದಾಯ ಭವನ ₹ 10 ಲಕ್ಷ</p>.<p>ಅಂತರಘಟ್ಟೆ ಗ್ರಾಮದ ಶ್ರೀದುರ್ಗಾಂಬ ಸಾರ್ವಜನಿಕ ಸಮುದಾಯ ಭವನ ₹ 20 ಲಕ್ಷ</p>.<p>ಅಂತರಘಟ್ಟೆ ಕಾಲೋನಿ ಹಟ್ಟಿ ಮಾರಿಯಮ್ಮ ದೇವಸ್ಥಾನದ ಅಭಿವೃದ್ದಿ ₹ 5 ಲಕ್ಷ</p>.<p>ಹೂಲಿಹಳ್ಳಿ ಜೆಜೆಎಂ ಕಾಮಗಾರಿ ₹ 50 ಲಕ್ಷ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು</strong>: ‘ಗಡಿ ಗ್ರಾಮಗಳನ್ನು ನಿರ್ಲಕ್ಷ್ಯಿಸದೆ ಅಲ್ಲಿಯೂ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗಿದೆ’ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.</p>.<p>ಸೋಮವಾರ ತಾಲ್ಲೂಕಿನ ಅಂತರಘಟ್ಟೆ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಅಡಚಣೆಯಾಗಿದೆ ಎಂಬ ಆರೋಪಕ್ಕೆ ಅರ್ಥವೇ ಇಲ್ಲ. ಗ್ಯಾರಂಟಿ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಪ್ರತ್ಯೇಕವಾಗಿ ಬಜೆಟ್ನಲ್ಲಿ ಹಣ ಮೀಸಲಿರಿಸಲಾಗಿದೆ. ತಾಲ್ಲೂಕಿನಲ್ಲೂ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ’ ಎಂದರು.</p>.<p>ಗಡಿಯಿಂದ ಮಂಜುನಾಥಪುರ ತಾಂಡ್ಯಾದವರೆಗೆ ₹1.5 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಳ್ಳಿಗಳಲ್ಲಿ ಸಮುದಾಯ ಭವನಗಳ ನಿರ್ಮಾಣ, ದೇವಸ್ಥಾನ ಮತ್ತು ಸಿಸಿ ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ’ ಎಂದರು.</p>.<p>ಜಿಲ್ಲಾ ಕೆಡಿಪಿ ಸದಸ್ಯ ಗುಮ್ಮನಹಳ್ಳಿ ಅಶೋಕ್ ಮಾತನಾಡಿ, ‘ಶಾಸಕರು ಗಡಿ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಿದ್ದಾರೆ. ಇದರ ಜತೆಗೆ ಸಂಸದರ ಅನುದಾನವೂ ಗಡಿ ಗ್ರಾಮಗಳಿಗೆ ಲಭಿಸಿದರೆ ಅಭಿವೃದ್ಧಿಗೆ ಪೂರಕವಾಗುತ್ತದೆ’ ಎಂದರು.</p>.<p>ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆಸಂದಿ ಕಲ್ಲೇಶ್, ಅಂತರಘಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿಯಪ್ಪ, ಉಪಾಧ್ಯಕ್ಷೆ ಸವಿತಾ, ಸದಸ್ಯರಾದ ಆಂಜನಪ್ಪ, ಅರುಣ್ ಕುಮಾರ್, ಪಾರ್ವತಮ್ಮ, ಮುಖಂಡರಾದ ಹೂಲಿಹಳ್ಳಿ ರಮೇಶ್, ಹನುಮಂತಪ್ಪ, ಚಂದ್ರಪ್ಪ ಇದ್ದರು.</p>.<p>ಚಾಲನೆ ನೀಡಿದ ಕಾಮಗಾರಿಗಳ ವಿವರ</p>.<p>ಹಡಗಲು ಗ್ರಾಮದ ಸಾರ್ವಜನಿಕ ಸಮುದಾಯ ಭವನ ₹ 15 ಲಕ್ಷ</p>.<p>ಹೂಲಿಹಳ್ಳಿ ಗ್ರಾಮದ ಸಾರ್ವಜನಿಕ ಸಮುದಾಯ ಭವನ ₹ 10 ಲಕ್ಷ</p>.<p>ಮಾಳೇಗುತ್ತಿ ಗ್ರಾಮದ ಸಾರ್ವಜನಿಕ ಸಮುದಾಯ ಭವನ ₹ 10 ಲಕ್ಷ</p>.<p>ಅಂತರಘಟ್ಟೆ ಗ್ರಾಮದ ಶ್ರೀದುರ್ಗಾಂಬ ಸಾರ್ವಜನಿಕ ಸಮುದಾಯ ಭವನ ₹ 20 ಲಕ್ಷ</p>.<p>ಅಂತರಘಟ್ಟೆ ಕಾಲೋನಿ ಹಟ್ಟಿ ಮಾರಿಯಮ್ಮ ದೇವಸ್ಥಾನದ ಅಭಿವೃದ್ದಿ ₹ 5 ಲಕ್ಷ</p>.<p>ಹೂಲಿಹಳ್ಳಿ ಜೆಜೆಎಂ ಕಾಮಗಾರಿ ₹ 50 ಲಕ್ಷ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>