ಚಿಕ್ಕಮಗಳೂರು: ಕೊಲೆ ಪ್ರಕರಣದ ವಿಚಾರಣಾಧೀನ ಕೈದಿ ನಂಜುಂಡಪ್ಪ (74) ಗುರುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಉಬ್ಬಸ ಜಾಸ್ತಿಯಾಗಿದ್ದರಿಂದ ನಂಜುಂಡಪ್ಪನನ್ನು ಬುಧವಾರ ಜಿಲ್ಲಾ ಆಸ್ಪತ್ರೆಗೆ ಒಯ್ಯಲಾಗಿತ್ತು. ಗುರುವಾರ ಬೆಳಿಗ್ಗೆ ಆತ ಮೃತಪಟ್ಟಿದ್ದಾರೆ ಎಂದು ಬಸವನಹಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.
ಸಖರಾಯಪಟ್ಟಣದ ಬಳಿ ಮಾಚೇನಹಳ್ಳಿ ಗ್ರಾಮದ ನಂಜುಂಡಪ್ಪ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಎಂದು ತಿಳಿಸಿದ್ದಾರೆ.