<p>ಚಿಕ್ಕಮಗಳೂರು: ತಂದೆ– ತಾಯಿಯಿಂದ ಆಸ್ತಿ ಪಡೆದ ನಂತರ ಅವರ ಪಾಲನೆ, ಪೋಷಣೆ ಮಾಡದಿದ್ದರೆ ಕಾನೂನಿನ ಮೂಲಕ ಆಸ್ತಿ ವಾಪಸ್ ಪಡೆದುಕೊಳ್ಳುವ ಅವಕಾಶವಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು.</p>.<p>ನಗರದ ಕೆಂಪನಹಳ್ಳಿಯ ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಹಿರಿಯರ ಹಿತದೃಷ್ಟಿ ಕಾಪಾಡಲು ಹಿರಿಯರ ಪೋಷಣೆ ಮತ್ತು ಸಂರಕ್ಷಣೆ ಕಾಯ್ದೆ ಜಾರಿಗೆ ಬಂದಿದೆ. ಜಿಲ್ಲಾ ಕಾನೂನು ಪ್ರಾಧಿಕಾರವು ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ತಮ್ಮ ಹಕ್ಕುಗಳು ಮತ್ತು ಕಾನೂನಿನ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.</p>.<p>ಆಶಾಕಿರಣ ಅಂಧ ಮಕ್ಕಳ ಶಾಲೆಯ ಅಧ್ಯಕ ಡಾ.ಜೆ.ಪಿ.ಕೃಷ್ಣೇಗೌಡ ಮಾತನಾಡಿ, ‘ಇಡೀ ಜಗತ್ತಿನ 221 ದೇಶಗಳಲ್ಲಿ ವಿಶೇಷವಾಗಿ ಹಿರಿಯರನ್ನು ಗೌರವಿಸುವ ದಿನವನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಷಯ’ ಎಂದು ಹೇಳಿದರು.</p>.<p>ಸಮಾಜಕ್ಕೆ ಹಿರಿಯ ನಾಗರಿಕರ ಕೊಡುಗೆ ಗುರುತಿಸಲು ಹಾಗೂ ಅವರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನ ಅವಕಾಶ ಕಲ್ಪಿಸಿದೆ. ಯುವಕರ ಜೀವನವು ವೇಗವಾಗಿ ಓಡುತ್ತಿದೆ. ಈ ಸಮಯದಲ್ಲಿ ಮನೆಯಲ್ಲಿರುವ ವೃದ್ಧರು ಒಂಟಿತನಕ್ಕೆ ಗುರಿಯಾಗುತ್ತಾರೆ. ವಿಶ್ವ ಹಿರಿಯ ನಾಗರಿಕರ ದಿನದ ಸಂದರ್ಭದಲ್ಲಿ ಮನೆಯ ಹಿರಿಯರೊಂದಿಗೆ ಕೆಲವು ಸುಂದರ ಕ್ಷಣಗಳನ್ನು ಕಳೆಯುವಂತೆ ಸಲಹೆ ನೀಡಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ವೈ.ಆಲದಾರ್ತಿ ಮಾತನಾಡಿ, ‘ಹಿರಿಯ ನಾಗರಿಕರ ದಿನದ ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದವರಿಗೆ ಬಹುಮಾನ ವಿತರಣೆ ಮಾಡಲಾಗುವುದು’ ಎಂದು ಹೇಳಿದರು.</p>.<p>ಮಹಿಳಾ ಮತ್ತು ಅಭಿವೃದ್ದಿ ಇಲಾಖೆಯ ಡಿ.ಸಂತೋಷ್, ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಗೋಪಾಲಕೃಷ್ಣ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಂಕರ ಕೊರವರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ತಂದೆ– ತಾಯಿಯಿಂದ ಆಸ್ತಿ ಪಡೆದ ನಂತರ ಅವರ ಪಾಲನೆ, ಪೋಷಣೆ ಮಾಡದಿದ್ದರೆ ಕಾನೂನಿನ ಮೂಲಕ ಆಸ್ತಿ ವಾಪಸ್ ಪಡೆದುಕೊಳ್ಳುವ ಅವಕಾಶವಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು.</p>.<p>ನಗರದ ಕೆಂಪನಹಳ್ಳಿಯ ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಹಿರಿಯರ ಹಿತದೃಷ್ಟಿ ಕಾಪಾಡಲು ಹಿರಿಯರ ಪೋಷಣೆ ಮತ್ತು ಸಂರಕ್ಷಣೆ ಕಾಯ್ದೆ ಜಾರಿಗೆ ಬಂದಿದೆ. ಜಿಲ್ಲಾ ಕಾನೂನು ಪ್ರಾಧಿಕಾರವು ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ತಮ್ಮ ಹಕ್ಕುಗಳು ಮತ್ತು ಕಾನೂನಿನ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.</p>.<p>ಆಶಾಕಿರಣ ಅಂಧ ಮಕ್ಕಳ ಶಾಲೆಯ ಅಧ್ಯಕ ಡಾ.ಜೆ.ಪಿ.ಕೃಷ್ಣೇಗೌಡ ಮಾತನಾಡಿ, ‘ಇಡೀ ಜಗತ್ತಿನ 221 ದೇಶಗಳಲ್ಲಿ ವಿಶೇಷವಾಗಿ ಹಿರಿಯರನ್ನು ಗೌರವಿಸುವ ದಿನವನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಷಯ’ ಎಂದು ಹೇಳಿದರು.</p>.<p>ಸಮಾಜಕ್ಕೆ ಹಿರಿಯ ನಾಗರಿಕರ ಕೊಡುಗೆ ಗುರುತಿಸಲು ಹಾಗೂ ಅವರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನ ಅವಕಾಶ ಕಲ್ಪಿಸಿದೆ. ಯುವಕರ ಜೀವನವು ವೇಗವಾಗಿ ಓಡುತ್ತಿದೆ. ಈ ಸಮಯದಲ್ಲಿ ಮನೆಯಲ್ಲಿರುವ ವೃದ್ಧರು ಒಂಟಿತನಕ್ಕೆ ಗುರಿಯಾಗುತ್ತಾರೆ. ವಿಶ್ವ ಹಿರಿಯ ನಾಗರಿಕರ ದಿನದ ಸಂದರ್ಭದಲ್ಲಿ ಮನೆಯ ಹಿರಿಯರೊಂದಿಗೆ ಕೆಲವು ಸುಂದರ ಕ್ಷಣಗಳನ್ನು ಕಳೆಯುವಂತೆ ಸಲಹೆ ನೀಡಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ವೈ.ಆಲದಾರ್ತಿ ಮಾತನಾಡಿ, ‘ಹಿರಿಯ ನಾಗರಿಕರ ದಿನದ ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದವರಿಗೆ ಬಹುಮಾನ ವಿತರಣೆ ಮಾಡಲಾಗುವುದು’ ಎಂದು ಹೇಳಿದರು.</p>.<p>ಮಹಿಳಾ ಮತ್ತು ಅಭಿವೃದ್ದಿ ಇಲಾಖೆಯ ಡಿ.ಸಂತೋಷ್, ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಗೋಪಾಲಕೃಷ್ಣ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಂಕರ ಕೊರವರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>