<p><strong>ಚಿಕ್ಕಮಗಳೂರು</strong>: ಕಾಳು ಮೆಣಸು, ಕಾಫಿ, ಅಡಿಕೆ ಸಂಸ್ಕರಣೆಗಾಗಿ ಚಿಕ್ಕಮಗಳೂರಿನಲ್ಲಿಯೇ ಸಂಸ್ಕರಣೆ ಘಟಕ ಸ್ಥಾಪಿಸಲು ಅನುದಾನ ಬಿಡುಗಡೆ ಮಾಡಲು ಕೇಂದ್ರ ಸರ್ಕಾಕರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಭಾರತ ಸರ್ಕಾರದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಕಾರ್ಯಕ್ರಮದ ಸಾಂಪ್ರದಾಯಿಕ ಕೈಗಾರಿಕೆಗಳ ಪುನುರಜ್ಜೀವನ ಯೋಜನೆಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಕಾಳು ಮೆಣಸು, ತೆಂಗು, ಕಾಫಿ, ಅಡಿಕೆ, ಖಾದಿ ಕೈಗಾರಿಕೆ, ಗ್ರಾಮ ಕೈಗಾರಿಕೆ, ಕಾಯರ್ ಉದ್ಯಮ, ಇಂತಹ ಸಂಪ್ರದಾಯಿಕ ಕೈಗಾರಿಕೆಗಳು ಈ ಯೋಜನೆಯ ವ್ಯಾಪ್ತಿಗೆ ಬರುತ್ತವೆ. ಸಾಂಪ್ರದಾಯಿಕ ಕೈಗಾರಿಕೆ ಮತ್ತು ಕುಶಲಕರ್ಮಿಗಳನ್ನು ಸಾಮೂಹಿಕವಾಗಿ ಸಂಘಟಿಸುವುದು ಈ ಯೋಜನೆಯ ಉದ್ದೇಶ ಎಂದರು.</p>.<p>ಸಭೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತಾ, ಉಪನಿರ್ದೇಶಕ ವೆಂಕಟೇಶ್ ಚೌಹಾಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಕಾಳು ಮೆಣಸು, ಕಾಫಿ, ಅಡಿಕೆ ಸಂಸ್ಕರಣೆಗಾಗಿ ಚಿಕ್ಕಮಗಳೂರಿನಲ್ಲಿಯೇ ಸಂಸ್ಕರಣೆ ಘಟಕ ಸ್ಥಾಪಿಸಲು ಅನುದಾನ ಬಿಡುಗಡೆ ಮಾಡಲು ಕೇಂದ್ರ ಸರ್ಕಾಕರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಭಾರತ ಸರ್ಕಾರದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಕಾರ್ಯಕ್ರಮದ ಸಾಂಪ್ರದಾಯಿಕ ಕೈಗಾರಿಕೆಗಳ ಪುನುರಜ್ಜೀವನ ಯೋಜನೆಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಕಾಳು ಮೆಣಸು, ತೆಂಗು, ಕಾಫಿ, ಅಡಿಕೆ, ಖಾದಿ ಕೈಗಾರಿಕೆ, ಗ್ರಾಮ ಕೈಗಾರಿಕೆ, ಕಾಯರ್ ಉದ್ಯಮ, ಇಂತಹ ಸಂಪ್ರದಾಯಿಕ ಕೈಗಾರಿಕೆಗಳು ಈ ಯೋಜನೆಯ ವ್ಯಾಪ್ತಿಗೆ ಬರುತ್ತವೆ. ಸಾಂಪ್ರದಾಯಿಕ ಕೈಗಾರಿಕೆ ಮತ್ತು ಕುಶಲಕರ್ಮಿಗಳನ್ನು ಸಾಮೂಹಿಕವಾಗಿ ಸಂಘಟಿಸುವುದು ಈ ಯೋಜನೆಯ ಉದ್ದೇಶ ಎಂದರು.</p>.<p>ಸಭೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತಾ, ಉಪನಿರ್ದೇಶಕ ವೆಂಕಟೇಶ್ ಚೌಹಾಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>