<p>ಕೊಪ್ಪ: ‘ಮಲೆನಾಡಿಗರನ್ನು ಉಳಿಸಿ’ ಎಂಬ ನಿಟ್ಟಿನಲ್ಲಿ ಸರ್ಕಾರದ ಎದುರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಲೆನಾಡು ಜನಪರ ಒಕ್ಕೂಟ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸೆ.20ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಕ್ಷೇತ್ರ ರೈತ ಸಂಘದ ಕಾರ್ಯಾಧ್ಯಕ್ಷ ನವೀನ್ ಕರುವಾನೆ ತಿಳಿಸಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ಈ ಹೋರಾಟ ಹಲವು ವರ್ಷಗಳಿಂದ ನಡೆಸುತ್ತಿದ್ದೇವೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಹಿ ಸಂಗ್ರಹಿಸುವುದರ ಜತೆಗೆ<br />ಸಭೆಗಳನ್ನು ನಡೆಸಲಾಗಿದೆ. ಸಭೆಗಳಲ್ಲಿ ಮಲೆನಾಡಿಗರು ಎದುರಿಸುತ್ತಿರುವ ಹಲವಾರು ಜ್ವಲಂತ ಸಮಸ್ಯೆಗಳನ್ನು ಚರ್ಚಿಸಲಾಗಿದೆ. ಪ್ರತಿಭಟನೆಗೆ ಬೆಂಗಳೂರಿನಲ್ಲಿರುವ ಮಲೆನಾಡಿ ಗರು ಕೈ ಜೋಡಿಸಬೇಕು ಎಂದು ಮನವಿ ಮಾಡುತ್ತಿದ್ದೇವೆ’ ಎಂದರು.</p>.<p>‘ಮಲೆನಾಡನ್ನು ವಿಶೇಷ ಕೃಷಿ ವಲಯವಾಗಿ ಘೋಷಿಸಬೇಕು. ಹಾಲಿನ ಘಟಕ ಸ್ಥಾಪಿಸಿ ಕೆಎಂಎಫ್ ಸಂಪರ್ಕ ಕಲ್ಪಿಸಬೇಕು. ಎಲೆಚುಕ್ಕಿ ರೋಗಕ್ಕೆ ಲಸಿಕೆ ಸಂಶೋಧಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 10 ಎಕರೆ ಜಾಗವನ್ನು ಆಶ್ರಯ ನಿವೇಶನಕ್ಕೆ ಕಾಯ್ದಿರಿಸಬೇಕು. ಪರಿಸರ ಸೂಕ್ಷ್ಮ ವಲಯ,<br />ಹುಲಿ ಯೋಜನೆ ಇತ್ಯಾದಿಗಳಿಂದ ಆಗುವ ತೊಂದರೆ ತಪ್ಪಿಸಬೇಕು. ಸೆಕ್ಷನ್ 4 ವಾಪಸ್ ಪಡೆಯುವುದು, ಏಪ್ರಿಲ್ 15ಅನ್ನು ಮಲೆನಾಡು ದಿನವನ್ನಾಗಿ ಆಚರಿಸುವುದು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ. ಮುಖ್ಯಮಂತ್ರಿಯವರು ಮಲೆನಾಡಿಗರ ಸಭೆ ಕರೆಯವುದಾಗಿ ಹೇಳಿದ್ದರೂ ಈವರೆಗೆ ಸಭೆ ಕರೆದಿಲ್ಲ’ ಎಂದು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಲೆನಾಡು ಜನಪರ ಒಕ್ಕೂಟದ ಮುಖಂಡರಾದ ಪ್ರವೀಣ್ ಬೆಳ್ಳಾಲೆ, ಉದಯ್ ಹಸಿರುಕೊಡಿಗೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪ: ‘ಮಲೆನಾಡಿಗರನ್ನು ಉಳಿಸಿ’ ಎಂಬ ನಿಟ್ಟಿನಲ್ಲಿ ಸರ್ಕಾರದ ಎದುರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಲೆನಾಡು ಜನಪರ ಒಕ್ಕೂಟ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸೆ.20ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಕ್ಷೇತ್ರ ರೈತ ಸಂಘದ ಕಾರ್ಯಾಧ್ಯಕ್ಷ ನವೀನ್ ಕರುವಾನೆ ತಿಳಿಸಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ಈ ಹೋರಾಟ ಹಲವು ವರ್ಷಗಳಿಂದ ನಡೆಸುತ್ತಿದ್ದೇವೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಹಿ ಸಂಗ್ರಹಿಸುವುದರ ಜತೆಗೆ<br />ಸಭೆಗಳನ್ನು ನಡೆಸಲಾಗಿದೆ. ಸಭೆಗಳಲ್ಲಿ ಮಲೆನಾಡಿಗರು ಎದುರಿಸುತ್ತಿರುವ ಹಲವಾರು ಜ್ವಲಂತ ಸಮಸ್ಯೆಗಳನ್ನು ಚರ್ಚಿಸಲಾಗಿದೆ. ಪ್ರತಿಭಟನೆಗೆ ಬೆಂಗಳೂರಿನಲ್ಲಿರುವ ಮಲೆನಾಡಿ ಗರು ಕೈ ಜೋಡಿಸಬೇಕು ಎಂದು ಮನವಿ ಮಾಡುತ್ತಿದ್ದೇವೆ’ ಎಂದರು.</p>.<p>‘ಮಲೆನಾಡನ್ನು ವಿಶೇಷ ಕೃಷಿ ವಲಯವಾಗಿ ಘೋಷಿಸಬೇಕು. ಹಾಲಿನ ಘಟಕ ಸ್ಥಾಪಿಸಿ ಕೆಎಂಎಫ್ ಸಂಪರ್ಕ ಕಲ್ಪಿಸಬೇಕು. ಎಲೆಚುಕ್ಕಿ ರೋಗಕ್ಕೆ ಲಸಿಕೆ ಸಂಶೋಧಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 10 ಎಕರೆ ಜಾಗವನ್ನು ಆಶ್ರಯ ನಿವೇಶನಕ್ಕೆ ಕಾಯ್ದಿರಿಸಬೇಕು. ಪರಿಸರ ಸೂಕ್ಷ್ಮ ವಲಯ,<br />ಹುಲಿ ಯೋಜನೆ ಇತ್ಯಾದಿಗಳಿಂದ ಆಗುವ ತೊಂದರೆ ತಪ್ಪಿಸಬೇಕು. ಸೆಕ್ಷನ್ 4 ವಾಪಸ್ ಪಡೆಯುವುದು, ಏಪ್ರಿಲ್ 15ಅನ್ನು ಮಲೆನಾಡು ದಿನವನ್ನಾಗಿ ಆಚರಿಸುವುದು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ. ಮುಖ್ಯಮಂತ್ರಿಯವರು ಮಲೆನಾಡಿಗರ ಸಭೆ ಕರೆಯವುದಾಗಿ ಹೇಳಿದ್ದರೂ ಈವರೆಗೆ ಸಭೆ ಕರೆದಿಲ್ಲ’ ಎಂದು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಲೆನಾಡು ಜನಪರ ಒಕ್ಕೂಟದ ಮುಖಂಡರಾದ ಪ್ರವೀಣ್ ಬೆಳ್ಳಾಲೆ, ಉದಯ್ ಹಸಿರುಕೊಡಿಗೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>