<p><strong>ಚಿಂತಾಮಣಿ</strong>: ಮೈಕ್ರೊ ಫೈನಾನ್ಸ್ ಮತ್ತು ಖಾಸಗಿ ಬ್ಯಾಂಕ್ಗಳ ಕಿರುಕುಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.</p>.<p>ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳ ನೇತೃತ್ವದಲ್ಲಿ ನೂರಾರು ರೈತರು ನಗರದ ಪ್ರವಾಸಿ ಮಂದಿರ ಬಳಿ ಜಮಾವಣೆಗೊಂಡು ಘೋಷಣೆ ಕೂಗಿದರು.</p>.<p>ರಾಜ್ಯ ಸಂಘದ ಕಾರ್ಯಾಧ್ಯಕ್ಷ ಜೆ.ವಿ.ರಘುನಾಥರೆಡ್ಡಿ ಮಾತನಾಡಿ, ಮೈಕ್ರೊ ಫೈನಾನ್ಸ್ ಮತ್ತು ಖಾಸಗಿ ಬ್ಯಾಂಕ್ಗಳು ಸಾರ್ವಜನಿಕರಿಗೆ ಇನ್ನಿಲ್ಲದ ಕಿರುಕುಳ ನೀಡುತ್ತಿವೆ. ಕ್ರಮಕೈಗೊಳ್ಳುವುದಾಗಿ ಸರ್ಕಾರದ ಹೇಳಿಕೆ ಅನುಷ್ಠಾನಗೊಂಡಿಲ್ಲ ಎಂದರು.</p>.<p>ಕೇಂದ್ರ ಸರ್ಕಾರ ರೈತರಿಗೆ ನೀಡುವ ₹6ಸಾವಿರ ಕಿಸಾನ್ ಸಮ್ಮಾನ್ ಹಣ, ರಾಜ್ಯ ಸರ್ಕಾರ ಮಹಿಳೆಯರಿಗೆ ಮಾಸಿಕವಾಗಿ ₹2ಸಾವಿರ ನೀಡುವ ಗೃಹಲಕ್ಷ್ಮಿ ಯೋಜನೆ, ನರೇಗಾ ಹಣ, ವೃದ್ಧಾಪ್ಯ ವೇತನ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿದ್ದಾರೆ. ಪ್ರಶ್ನೆ ಮಾಡಿದರೆ ಹೀನಾಯವಾಗಿ ಮಾತನಾಡುತ್ತಾರೆ ಎಂದು ಪ್ರತಿಭಟನಾಕಾರರು ದೂರಿದರು.</p>.<p>ರೈತರಿಗೆ ಕಿರುಕುಳ ನೀಡುತ್ತಿರುವ ಮೈಕ್ರೊ ಪೈನಾನ್ಸ್ ಮತ್ತು ಖಾಸಗಿ ಬ್ಯಾಂಕ್ಗಳ ವ್ಯವಸ್ಥಾಪಕರ ಸಭೆ ಕರೆದು ಎಚ್ಚರಿಸಬೇಕು ಎಂದು ಪ್ರತಿಭಟನಕಾರರು ಎಚ್ಚರಿಸಿದರು. </p>.<p>ರೈತ ಸಂಘಟನೆಯ ಪದಾಧಿಕಾರಿಗಳಾದ ವೆಂಕಟರಾಮಯ್ಯ, ನಾರಾಯಣಸ್ವಾಮಿ, ಬಿ.ಎಂ.ರವೀಂದ್ರಗೌಡ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಮೈಕ್ರೊ ಫೈನಾನ್ಸ್ ಮತ್ತು ಖಾಸಗಿ ಬ್ಯಾಂಕ್ಗಳ ಕಿರುಕುಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.</p>.<p>ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳ ನೇತೃತ್ವದಲ್ಲಿ ನೂರಾರು ರೈತರು ನಗರದ ಪ್ರವಾಸಿ ಮಂದಿರ ಬಳಿ ಜಮಾವಣೆಗೊಂಡು ಘೋಷಣೆ ಕೂಗಿದರು.</p>.<p>ರಾಜ್ಯ ಸಂಘದ ಕಾರ್ಯಾಧ್ಯಕ್ಷ ಜೆ.ವಿ.ರಘುನಾಥರೆಡ್ಡಿ ಮಾತನಾಡಿ, ಮೈಕ್ರೊ ಫೈನಾನ್ಸ್ ಮತ್ತು ಖಾಸಗಿ ಬ್ಯಾಂಕ್ಗಳು ಸಾರ್ವಜನಿಕರಿಗೆ ಇನ್ನಿಲ್ಲದ ಕಿರುಕುಳ ನೀಡುತ್ತಿವೆ. ಕ್ರಮಕೈಗೊಳ್ಳುವುದಾಗಿ ಸರ್ಕಾರದ ಹೇಳಿಕೆ ಅನುಷ್ಠಾನಗೊಂಡಿಲ್ಲ ಎಂದರು.</p>.<p>ಕೇಂದ್ರ ಸರ್ಕಾರ ರೈತರಿಗೆ ನೀಡುವ ₹6ಸಾವಿರ ಕಿಸಾನ್ ಸಮ್ಮಾನ್ ಹಣ, ರಾಜ್ಯ ಸರ್ಕಾರ ಮಹಿಳೆಯರಿಗೆ ಮಾಸಿಕವಾಗಿ ₹2ಸಾವಿರ ನೀಡುವ ಗೃಹಲಕ್ಷ್ಮಿ ಯೋಜನೆ, ನರೇಗಾ ಹಣ, ವೃದ್ಧಾಪ್ಯ ವೇತನ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿದ್ದಾರೆ. ಪ್ರಶ್ನೆ ಮಾಡಿದರೆ ಹೀನಾಯವಾಗಿ ಮಾತನಾಡುತ್ತಾರೆ ಎಂದು ಪ್ರತಿಭಟನಾಕಾರರು ದೂರಿದರು.</p>.<p>ರೈತರಿಗೆ ಕಿರುಕುಳ ನೀಡುತ್ತಿರುವ ಮೈಕ್ರೊ ಪೈನಾನ್ಸ್ ಮತ್ತು ಖಾಸಗಿ ಬ್ಯಾಂಕ್ಗಳ ವ್ಯವಸ್ಥಾಪಕರ ಸಭೆ ಕರೆದು ಎಚ್ಚರಿಸಬೇಕು ಎಂದು ಪ್ರತಿಭಟನಕಾರರು ಎಚ್ಚರಿಸಿದರು. </p>.<p>ರೈತ ಸಂಘಟನೆಯ ಪದಾಧಿಕಾರಿಗಳಾದ ವೆಂಕಟರಾಮಯ್ಯ, ನಾರಾಯಣಸ್ವಾಮಿ, ಬಿ.ಎಂ.ರವೀಂದ್ರಗೌಡ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>