ಪರದೇಶಪ್ಪನ ಮಠದ ಅರಣ್ಯ ಸಂತ್ರಸ್ತರ ಹಿತರಕ್ಷಣಾ ಸಮಿತಿ ಕಾರ್ಯದರ್ಶಿ ವಿರೂಪಾಕ್ಷಯ್ಯ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಭದ್ರಾ ಅಭಯಾರಣ್ಯ, ಹುಲಿ ಯೋಜನೆಗೆ ನಮ್ಮ ಜಮೀನು, ಮನೆಗಳನ್ನು ಅರಣ್ಯ ಇಲಾಖೆ ಸ್ವಾಧೀನಪಡಿಸಿಕೊಂಡಿರುವುದಕ್ಕೆ ಎಲ್ಲರಿಗೂ ಒಟ್ಟಿಗೆ ಪರಿಹಾರ, ಪುನವರ್ಸತಿ ಕಲ್ಪಿಸಬೇಕು ಎಂದು ಹಲವು ಬಾರಿ ಮನವಿ ಮಾಡಿದ್ದೇವೆ. ಈವರೆಗೆ ಕ್ರಮ ವಹಿಸಿಲ್ಲ. ಈಗ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಇದು ಸರಿಯಲ್ಲ’ ಎಂದು ದೂರಿದರು.