<p><strong>ಕೊಪ್ಪ:</strong> ‘ಶಾಸಕ ಟಿ.ಡಿ.ರಾಜೇಗೌಡ ಜನವಿರೋಧಿ ಅಷ್ಟೇ ಅಲ್ಲ ರೈತ ವಿರೋಧಿಯೂ ಆಗಿದ್ದಾರೆ. ತಾಲ್ಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗಲು ಅವರ ವೈಫಲ್ಯವೇ ಕಾರಣ’ ಎಂದು ಬಿಜೆಪಿಯ ಪಂಚಾಯತ್ ರಾಜ್ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕ ಎಸ್.ಎನ್.ರಾಮಸ್ವಾಮಿ ಆರೋಪಿಸಿದರು.</p>.<p>ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಲೆನಾಡಿನಲ್ಲಿ ಒತ್ತುವರಿ ಜಾಗವನ್ನು ಖುಲ್ಲಾ ಯಾವಾಗ ಮಾಡುತ್ತೀರಿ? ಎಂದು ಕ್ಷೇತ್ರದ ಶಾಸಕರು ವಿಧಾನಸಭೆಯಲ್ಲಿ ಪ್ರಶ್ನಿಸಿದ್ದರು. ಭೂ ಮಂಜೂರಾತಿಗೆ ಅರಣ್ಯ ಇಲಾಖೆ ಒಪ್ಪಿಗೆ ಅಗತ್ಯ. ಈ ಎಲ್ಲಾ ಕಾರಣಕ್ಕಾಗಿಯೇ ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ’ ಎಂದು ದೂರಿದರು.</p>.<p>‘ಹಣ ಕೊಟ್ಟವರಿಗೆ ಮಾತ್ರ ಹಕ್ಕುಪತ್ರ, ಹಣ ನೀಡದವರಿಗೆ ಅರಣ್ಯ ಇಲಾಖೆ ಒಪ್ಪಿಗೆಗೆ ಬರೆಯಲಾಗುತ್ತಿದೆ. ರೈತರ ಪರವಾಗಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಎದುರು ಜುಲೈ 4 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹಲವರು ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಜೆ.ಪುಣ್ಯಪಾಲ್, ಎಪಿಎಂಸಿ ಅಧ್ಯಕ್ಷ ಕಲ್ಕೆರೆ ವಿಶ್ವನಾಥ್, ತಾಲ್ಲೂಕು ಬಿಜೆಪಿ ಕಾರ್ಯದರ್ಶಿ ಎಚ್.ಆರ್.ಜಗದೀಶ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ರೇವಂತ್, ಹರಿಹರಪುರ ಹೋಬಳಿ ಘಟಕದ ಅಧ್ಯಕ್ಷ ಅಜಿತ್ ಬಿಕ್ಳಿ, ಸೋಷಿಯಲ್ ಮೀಡಿಯಾ ಉಸ್ತುವಾರಿ ರಂಜಿತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ:</strong> ‘ಶಾಸಕ ಟಿ.ಡಿ.ರಾಜೇಗೌಡ ಜನವಿರೋಧಿ ಅಷ್ಟೇ ಅಲ್ಲ ರೈತ ವಿರೋಧಿಯೂ ಆಗಿದ್ದಾರೆ. ತಾಲ್ಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗಲು ಅವರ ವೈಫಲ್ಯವೇ ಕಾರಣ’ ಎಂದು ಬಿಜೆಪಿಯ ಪಂಚಾಯತ್ ರಾಜ್ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕ ಎಸ್.ಎನ್.ರಾಮಸ್ವಾಮಿ ಆರೋಪಿಸಿದರು.</p>.<p>ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಲೆನಾಡಿನಲ್ಲಿ ಒತ್ತುವರಿ ಜಾಗವನ್ನು ಖುಲ್ಲಾ ಯಾವಾಗ ಮಾಡುತ್ತೀರಿ? ಎಂದು ಕ್ಷೇತ್ರದ ಶಾಸಕರು ವಿಧಾನಸಭೆಯಲ್ಲಿ ಪ್ರಶ್ನಿಸಿದ್ದರು. ಭೂ ಮಂಜೂರಾತಿಗೆ ಅರಣ್ಯ ಇಲಾಖೆ ಒಪ್ಪಿಗೆ ಅಗತ್ಯ. ಈ ಎಲ್ಲಾ ಕಾರಣಕ್ಕಾಗಿಯೇ ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ’ ಎಂದು ದೂರಿದರು.</p>.<p>‘ಹಣ ಕೊಟ್ಟವರಿಗೆ ಮಾತ್ರ ಹಕ್ಕುಪತ್ರ, ಹಣ ನೀಡದವರಿಗೆ ಅರಣ್ಯ ಇಲಾಖೆ ಒಪ್ಪಿಗೆಗೆ ಬರೆಯಲಾಗುತ್ತಿದೆ. ರೈತರ ಪರವಾಗಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಎದುರು ಜುಲೈ 4 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹಲವರು ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<p>ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಜೆ.ಪುಣ್ಯಪಾಲ್, ಎಪಿಎಂಸಿ ಅಧ್ಯಕ್ಷ ಕಲ್ಕೆರೆ ವಿಶ್ವನಾಥ್, ತಾಲ್ಲೂಕು ಬಿಜೆಪಿ ಕಾರ್ಯದರ್ಶಿ ಎಚ್.ಆರ್.ಜಗದೀಶ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ರೇವಂತ್, ಹರಿಹರಪುರ ಹೋಬಳಿ ಘಟಕದ ಅಧ್ಯಕ್ಷ ಅಜಿತ್ ಬಿಕ್ಳಿ, ಸೋಷಿಯಲ್ ಮೀಡಿಯಾ ಉಸ್ತುವಾರಿ ರಂಜಿತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>