ಸಂಘಟನೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಸುರೇಶ್ ನೇತೃತ್ವದಲ್ಲಿ ಸಭೆ ನಡೆಯಿತು. ಕುಂಬಳಡಿಕೆಯ ಕುಮಾರಸ್ವಾಮಿ ಬಡಾವಣೆಯಲ್ಲಿ 3 ವರ್ಷಗಳಿಂದ ವಸತಿ ರಹಿತ ಬಡವರು, ಕಾರ್ಮಿಕರು ಗುಡಿಸಲು ನಿರ್ಮಿಸಿ ವಾಸ ಮಾಡುತ್ತಿದ್ದಾರೆ. ಸರ್ವೆ ನಂಬರ್ 153 ಕಂದಾಯ ಭೂಮಿ ಆಗಿದ್ದರೂ, ಬಡವರಿಗೆ ಹಕ್ಕು ಪತ್ರ ನೀಡದಿರುವುದನ್ನು ಖಂಡಿಸಿ ಕಳಸದಲ್ಲಿ ಪ್ರತಿಭಟನೆ ಮತ್ತು ಕಳಸ ತಾಲ್ಲೂಕು ಕಚೇರಿ ಮುಂಭಾಗ ಧರಣಿ ನಡೆಸುವ ತೀರ್ಮಾನಕ್ಕೆ ಬರಲಾಯಿತು.