ಕೆಪಿಸಿಸಿ ಸದಸ್ಯ ಕೆ.ಎಸ್.ಆನಂದ್ ಮಾತನಾಡಿ, ‘ವಿದ್ಯಾರ್ಥಿಗಳಿಗೆ ಅನನುಕೂಲವಾಗುವಂತೆ ಬಸ್ ಪಾಸ್ ವಿತರಿಸಿದ್ದಾರೆ. ಕೇವಲ ಎರಡು ತಿಂಗಳಿಗೆ ಮಾತ್ರ ಪಾಸ್ ವಿತರಣೆಯಾಗಿದೆ. ಆದರೆ, ನವೆಂಬರ್ನಲ್ಲಿ ಪರೀಕ್ಷೆಗಳಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಇವೆಲ್ಲವನ್ನೂ ವಿದ್ಯಾರ್ಥಿಗಳು ಗಮನಿಸಬೇಕು. ನಿಮ್ಮ ಹಕ್ಕನ್ನು ಕಸಿದುಕೊಳ್ಳವ ಅವಕಾಶಗಳನ್ನು ಪ್ರತಿಭಟಿಸಬೇಕು. ನಿಮ್ಮ ಜೊತೆ ಕಾಂಗ್ರೆಸ್ ಪಕ್ಷ ಸದಾ ಇರುತ್ತದೆ’ ಎಂದರು.