‘ಕಾರ್ಮಿಕರ 44 ಕಾನೂನುಗಳನ್ನು 4 ಸಂಹಿತೆಗಳಾಗಿ ಮಾರ್ಪಾಡು ಮಾಡಿ ರುವುದನ್ನು ಹಿಂಪಡೆಯಬೇಕು. ಎಪಿಎಂಸಿ, ಭೂ ಸುಧಾರಣೆ, ಕಾರ್ಮಿಕ ಕಾಯ್ದೆ ಗಳ ತಿದ್ದುಪಡಿ ರದ್ದುಗೊಳಿಸ ಬೇಕು. ಬ್ಯಾಂಕು, ವಿಮೆ, ರೈಲ್ವೆ, ವಿಮಾನ ನಿಲ್ದಾಣ, ಬಂದರು, ವಿದ್ಯುತ್ ಸಹಿತ ಸಾರ್ವಜನಿಕ ಕ್ಷೇತ್ರಗಳನ್ನು ಖಾಸಗೀಕರಣ ಮಾಡಬಾರದು. ನಗರ ಪ್ರದೇಶಗಳಿಗೂ ಉದ್ಯೋಗ ಖಾತ್ರಿ ಯೋಜನೆಯಡಿ ವಿಸ್ತರಿಸಬೇಕು. ವಾರ್ಷಿಕ ಕನಿಷ್ಠ 200 ದಿನಗಳು ಉದ್ಯೋಗ ನೀಡಬೇಕು. ಅಂಗ ನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರನ್ನು ಕಾಯಂಗೊಳಿಸ ಬೇಕು. ಕನಿಷ್ಠ ₹18 ಸಾವಿರ ವೇತನ ನೀಡಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.