ಚಿಕ್ಕಮಗಳೂರು: ಪರಿಶಿಷ್ಟ ಜಾತಿಯ ಯುವಕರೊಬ್ಬರಿಗೆ ಮೂತ್ರ ನೆಕ್ಕಿಸಿದ ಆರೋಪ ಎದುರಿಸುತ್ತಿರುವ ಪಿಎಸ್ಐ ಅರ್ಜುನ್ ಅವರನ್ನು ನಗರದ ಒಂದನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಸಿಐಡಿ ತಂಡವು ಅರ್ಜುನ್ ಅವರನ್ನು ಒಂದನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ಪುಷ್ಪಾಂಜಲಿ ಅವರ ಮುಂದೆ ಗುರುವಾರ ಹಾಜರುಪಡಿಸಿತ್ತು.
ಮೂಡಿಗೆರೆ ತಾಲ್ಲೂಕಿನ ಕಿರಗುಂದ ಗ್ರಾಮದ ಪುನೀತ್ಗೆ ಗೋಣಿಬೀಡು ಠಾಣೆಯಲ್ಲಿ ಮೂತ್ರ ನೆಕ್ಕಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರ್ಜುನ್ ಅವರನ್ನು ಬೆಂಗಳೂರಿನಲ್ಲಿ ಸಿಐಡಿ ಪೊಲೀಸರು ಬುಧವಾರ ಬಂಧಿಸಿದ್ದರು.