<p><strong>ನರಸಿಂಹರಾಜಪುರ</strong>: ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಸರ್ಕಾರದ ಜತೆ ಸಂಘ, ಸಂಸ್ಥೆಗಳು ಕೈ ಜೋಡಿಸಿದ್ದರಿಂದ ಉತ್ತಮ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ನರಸಿಂಹಮೂರ್ತಿ ಹೇಳಿದರು.</p>.<p>ಪಟ್ಟಣದ ಬಸ್ ನಿಲ್ದಾಣದಲ್ಲಿ ಜ್ವಾಲಾಮಾಲಿನಿ ಜೆಸಿಐ ಸಂಸ್ಥೆಯು ದತ್ತು ಪಡೆದು ನಿರ್ವಹಣೆ ಮಾಡಿದ್ದ ಪಲ್ಸ್ ಪೋಲಿಯೋ ಕೇಂದ್ರದಲ್ಲಿ ಮಂಗಳವಾರ ನಡೆದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>ಬಸ್ ನಿಲ್ದಾಣದ ಪಲ್ಸ್ ಪೋಲಿಯೋ ಕೇಂದ್ರದಲ್ಲಿ 3 ದಿನದಲ್ಲಿ 199 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ತಾಲ್ಲೂಕಿನಲ್ಲಿ 4,802 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. ಆದರೆ, 4,879 ಮಕ್ಕಳಿಗೆ ಲಸಿಕೆ ಹಾಕಲಾಗಿದ್ದು ಗುರಿಗಿಂತ ಜಾಸ್ತಿ ಲಸಿಕೆ ಹಾಕಿ ಶೇ 101 ರಷ್ಟು ಸಾಧನೆ ಮಾಡಿದ್ದೇವೆ. ಈ ಸಾಧನೆ ಮಾಡಲು ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿ, ವಿವಿಧ ಸಂಘ ಸಂಸ್ಥೆಗಳು ಕಾರಣವಾಗಿದೆ ಎಂದರು.</p>.<p>ಜ್ವಾಲಾಮಾಲಿನಿ ಜೆಸಿಐ ಸಂಸ್ಥೆಯ ಅಧ್ಯಕ್ಷ ಆದರ್ಶ ಬಿ.ಗೌಡ ಮಾತನಾಡಿ, 2009ರಲ್ಲಿ ಪ್ರಥಮ ಬಾರಿಗೆ ಜೆಸಿಐ ಸಂಸ್ಥೆಯಿಂದ ಬಸ್ ನಿಲ್ದಾಣದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕೇಂದ್ರವನ್ನು ದತ್ತು ಪಡೆಯಲಾಗಿತ್ತು. ಆ ವರ್ಷದಿಂದ ಪ್ರತಿ ವರ್ಷ ಬಸ್ ನಿಲ್ದಾಣದಲ್ಲಿ ಜೆಸಿಐ ಸಂಸ್ಥೆಯಿಂದ ಲಸಿಕಾ ಕೇಂದ್ರವನ್ನು ನಿರ್ವಹಿಸುತ್ತಿದ್ದೇವೆ ಎಂದರು.</p>.<p>ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆ ಅಧ್ಯಕ್ಷ ಎಸ್.ಎಸ್.ಜಗದೀಶ್ ಮಾತನಾಡಿ, ಜೆಸಿಐ ಸಂಸ್ಥೆಯು ಸಮಾಜಮುಖಿ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಜೆಸಿಐ ಪೂರ್ವಾಧ್ಯಕ್ಷ ಅಭಿನವ ಗಿರಿರಾಜ್ ಮಾತನಾಡಿದರು. ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ನರಸಿಂಹಮೂರ್ತಿ ಹಾಗೂ ಜೆಸಿಐ ಪೂರ್ವಾಧ್ಯಕ್ಷ ಪಿ.ಆರ್.ಸುಕುಮಾರ್ ಅವರನ್ನು ಗೌರವಿಸಲಾಯಿತು. ಜೆಸಿಐ ಕಾರ್ಯದರ್ಶಿ ರಜತ್ ವಗಡೆ ಹಾಗೂ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ</strong>: ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಸರ್ಕಾರದ ಜತೆ ಸಂಘ, ಸಂಸ್ಥೆಗಳು ಕೈ ಜೋಡಿಸಿದ್ದರಿಂದ ಉತ್ತಮ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ನರಸಿಂಹಮೂರ್ತಿ ಹೇಳಿದರು.</p>.<p>ಪಟ್ಟಣದ ಬಸ್ ನಿಲ್ದಾಣದಲ್ಲಿ ಜ್ವಾಲಾಮಾಲಿನಿ ಜೆಸಿಐ ಸಂಸ್ಥೆಯು ದತ್ತು ಪಡೆದು ನಿರ್ವಹಣೆ ಮಾಡಿದ್ದ ಪಲ್ಸ್ ಪೋಲಿಯೋ ಕೇಂದ್ರದಲ್ಲಿ ಮಂಗಳವಾರ ನಡೆದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>ಬಸ್ ನಿಲ್ದಾಣದ ಪಲ್ಸ್ ಪೋಲಿಯೋ ಕೇಂದ್ರದಲ್ಲಿ 3 ದಿನದಲ್ಲಿ 199 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ತಾಲ್ಲೂಕಿನಲ್ಲಿ 4,802 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. ಆದರೆ, 4,879 ಮಕ್ಕಳಿಗೆ ಲಸಿಕೆ ಹಾಕಲಾಗಿದ್ದು ಗುರಿಗಿಂತ ಜಾಸ್ತಿ ಲಸಿಕೆ ಹಾಕಿ ಶೇ 101 ರಷ್ಟು ಸಾಧನೆ ಮಾಡಿದ್ದೇವೆ. ಈ ಸಾಧನೆ ಮಾಡಲು ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿ, ವಿವಿಧ ಸಂಘ ಸಂಸ್ಥೆಗಳು ಕಾರಣವಾಗಿದೆ ಎಂದರು.</p>.<p>ಜ್ವಾಲಾಮಾಲಿನಿ ಜೆಸಿಐ ಸಂಸ್ಥೆಯ ಅಧ್ಯಕ್ಷ ಆದರ್ಶ ಬಿ.ಗೌಡ ಮಾತನಾಡಿ, 2009ರಲ್ಲಿ ಪ್ರಥಮ ಬಾರಿಗೆ ಜೆಸಿಐ ಸಂಸ್ಥೆಯಿಂದ ಬಸ್ ನಿಲ್ದಾಣದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕೇಂದ್ರವನ್ನು ದತ್ತು ಪಡೆಯಲಾಗಿತ್ತು. ಆ ವರ್ಷದಿಂದ ಪ್ರತಿ ವರ್ಷ ಬಸ್ ನಿಲ್ದಾಣದಲ್ಲಿ ಜೆಸಿಐ ಸಂಸ್ಥೆಯಿಂದ ಲಸಿಕಾ ಕೇಂದ್ರವನ್ನು ನಿರ್ವಹಿಸುತ್ತಿದ್ದೇವೆ ಎಂದರು.</p>.<p>ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆ ಅಧ್ಯಕ್ಷ ಎಸ್.ಎಸ್.ಜಗದೀಶ್ ಮಾತನಾಡಿ, ಜೆಸಿಐ ಸಂಸ್ಥೆಯು ಸಮಾಜಮುಖಿ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಜೆಸಿಐ ಪೂರ್ವಾಧ್ಯಕ್ಷ ಅಭಿನವ ಗಿರಿರಾಜ್ ಮಾತನಾಡಿದರು. ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ನರಸಿಂಹಮೂರ್ತಿ ಹಾಗೂ ಜೆಸಿಐ ಪೂರ್ವಾಧ್ಯಕ್ಷ ಪಿ.ಆರ್.ಸುಕುಮಾರ್ ಅವರನ್ನು ಗೌರವಿಸಲಾಯಿತು. ಜೆಸಿಐ ಕಾರ್ಯದರ್ಶಿ ರಜತ್ ವಗಡೆ ಹಾಗೂ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>