‘ಹಣ ಪಾವತಿಯ ವೇಳೆಗೆ ಸುಮಾರು 1 ತಿಂಗಳು ತಗಲುತ್ತದೆ, ಮುಂಗಾರು ಸಮಯವಾಗಿರುವುದರಿಂದ ಆದಷ್ಟು ಬೇಗನೆ ಹಣ ಪಾವತಿಸಿದರೆ ಅನುಕೂಲ ಎನ್ನುವುದು ರೈತರ ಒತ್ತಾಯ. ಇದಕ್ಕೆ ಪ್ರತಿಕ್ರಿಯಿಸಿದ ನಾಫೆಡ್ ಅಧಿಕಾರಿ, ‘ಕಡೂರು, ಬೀರೂರು, ಪಂಚನಹಳ್ಳಿ, ತರೀಕೆರೆ ಮತ್ತು ಚಿಕ್ಕಮಗಳೂರಿನಲ್ಲಿ ಖರೀದಿ ನಡೆದಿದ್ದು ,ಖರೀದಿ ಸಮಯದಲ್ಲಿ ಗುಣಮಟ್ಟದ ಮೇಲೆ ಕೊಬ್ಬರಿಯನ್ನು ಆರಿಸಿ ವಿಂಗಡಿಸುವ ವೇಳೆಗೆ ಸಮಯ ತಗಲುತ್ತದೆ. ಹೀಗಾಗಿ ಈಗ ನಡೆದಿರುವ ಪ್ರಕ್ರಿಯೆಯೇ ಸುಗಮವಾಗಿದೆ. ಹಣ ಬಿಡುಗಡೆ ಸರ್ಕಾರದ ಮಟ್ಟದ್ದಾಗಿದ್ದು ಎಲ್ಲ ಪ್ರಕ್ರಿಯೆ ಮುಗಿದ ನಂತರ ಹಣ ಪಾವತಿ ಆಗುತ್ತದೆ’ ಎಂದರು.