‘ಈ ಹಿಂದೆ ದತ್ತಪೀಠಕ್ಕೆ ಭೇಟಿ ನೀಡಿದ್ದೇನೆ. ಇದೇ ಮೊದಲ ಬಾರಿಗೆ ಮಾಲೆ ಧರಿಸಿದ್ದೇನೆ. ಸೋಮವಾರ ಹೋಮದಲ್ಲೂ ಪಾಲ್ಗೊಳ್ಳುತ್ತೇನೆ. ಈ ಹಿಂದೆ ನ್ಯಾಯಾಲಯದಲ್ಲಿ ವಿಷಯ ಇತ್ತು. ಕಂದಾಯ ಸಚಿವನಾಗಿ ಆದೇಶ ಹೊರಡಿಸುವ ಸ್ಥಾನದಲ್ಲಿ ಇದ್ದು ಹಿಂದೂ ಅರ್ಚಕರ ನೇಮಕ ರೀತಿಯ ಕ್ರಮಗಳನ್ನು ಕೈಗೊಂಡಿದ್ದೇನೆ. ದತ್ತಪೀಠವೇ ಬೇರೆ, ದರ್ಗಾವೇ ಬೇರೆ ಎಂದು ನ್ಯಾಯಾಲಯ ಹೇಳಿದೆ. ಆದ್ದರಿಂದ ಗೊಂದಲ ಪರಿಹರಿಸುವ ಕೆಲಸವನ್ನು ಸರ್ಕಾರ ಮಾಡಬೇಕಿದೆ’ ಎಂದರು. ಬಿಜೆಪಿ ಮುಖಂಡರಾದ ಸಿ.ಟಿ.ರವಿ, ಪ್ರಮೋದ್ ಮಧ್ವರಾಜ್ ಇದ್ದರು.