ಇಡೀ ದಿನ ಎಡಬಿಡದೇ ಮಳೆ ಸುರಿದು ಜನಜೀವನವನ್ನು ಅಸ್ತವ್ಯಸ್ತಗೊಳಿಸಿತು. ನಾಟಿ ಮಾಡಿದ್ದ ಭತ್ತದ ಗದ್ದೆಗಳು ಜಲಾವೃತಗೊಂಡವು. ಉದುಸೆ, ಜಿ. ಹೊಸಳ್ಳಿ, ಅಗ್ರಹಾರ, ಬೆಟ್ಟದಮನೆ ಭಾಗಗಳಲ್ಲಿ ನಾಟಿ ಮಾಡಿದ್ದ ಗದ್ದೆಗೆ ಮರಳು ನುಗ್ಗಿ, ಪೈರೆಲ್ಲವೂ ಮಣ್ಣಿನಡಿಯಲ್ಲಿ ಮುಚ್ಚಿ ಹೋಗಿ ನಷ್ಟ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿ 173ರ ಕುದ್ರೆಗುಂಡಿ ಗ್ರಾಮದ ಬಳಿ ಹೆದ್ದಾರಿಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ಒಂದು ಗಂಟೆ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.