ಶಾಸಕ ಬೆಳ್ಳಿಪ್ರಕಾಶ್ ಮತ್ತು ಅಧಿಕಾರಿಗಳ ತಂಡ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿ ಹಾನಿಗೊಂಡ ಮನೆಗಳನ್ನು ಪರಿಶೀಲಿಸಿದರು. ಹಾನಿಗೊಳಗಾದ 12 ಮನೆಗಳಿಗೆ ಕಂದಾಯ ಇಲಾಖೆ ಮೂಲಕ ತಲಾ ₹10 ಸಾವಿರ ಮೊತ್ತದ ತಾತ್ಕಲಿಕ ಪರಿಹಾರದ ಚೆಕ್ ಅನ್ನು ಶಾಸಕರು ವಿತರಿಸಿದರು. ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು. ತಾಲ್ಲೂಕು ಪಂಚಾಯಿತಿ ಇಒ ಡಾ. ಟಿ.ಎಂ. ದೇವರಾಜ್ನಾಯ್ಕ, ಎಇಇಗಳಾದ ದಯಾನಂದ್, ತಮ್ಮಯ್ಯ, ಮತ್ತು ಕಂದಾಯ ವಿಭಾಗದ ಅಧಿಕಾರಿಗಳು ಇದ್ದರು.