ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಫಿನಾಡಿನಲ್ಲಿ ಮಳೆ; ಸಿಡಿಲು ಬಡಿದು ದಂಪತಿ ಸಾವು

Last Updated 29 ಏಪ್ರಿಲ್ 2019, 13:04 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರ ಗುಡುಗುಸಹಿತ ಹದ ಮಳೆಯಾಯಿತು.ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ತೇಗೂರಿನ ಮಂಜುನಾಥ್(48) ಮತ್ತು ಭಾರತಿ (42) ದಂಪತಿ ಮೃತಪಟ್ಟಿದ್ದಾರೆ.

ಜಮೀನಿನಲ್ಲಿಸಂಜೆ ತರಕಾರಿ ಕೀಳುವ ವೇಳೆ ಸಿಡಿಲು ಬಡಿದಿದೆ. ದಂಪತಿಗೆ ಪುತ್ರಿ ಪೂಜಾ, ಪುತ್ರ ದೀಪಕ್‌ ಇದ್ದಾರೆ.

ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜನ ಜಮಾಯಿಸಿದ್ದಾರೆ. ಕುಟುಂಬದವರ ಆಕ್ರಂದನ ಹೇಳತೀರದಾಗಿದೆ.

ಮಧ್ಯಾಹ್ನ 3.30ರ ಹೊತ್ತಿಗೆ ವರ್ಷಧಾರೆ ಶುರುವಾಯಿತು. ಸ್ವಲ್ಪ ಹೊತ್ತಿನ ನಂತರ ಬಿರುಸಾಯಿತು. ಗುಡುಗುಮಿಂಚಿನ ಆರ್ಭಟ ಇತ್ತು. ಸುಮಾರು ಮುಕ್ಕಾಲು ಗಂಟೆ ಮಳೆ ಸುರಿಯಿತು. ಬಿಸಿಲ ತಾಪದಿಂದ ಕಾದಿದ್ದ ಇಳೆಗೆ ತಂಪೆರೆಯಿತು.

ಅಮೃತ್‌ ಯೋಜನೆಯಡಿ ಕುಡಿಯುವ ನೀರಿನ ಪೈಪುಗಳನ್ನು ಅಳವಡಿಸಲು ನಗರದ ಐಜಿ ರಸ್ತೆ ಬದಿಯಲ್ಲಿ ಅಗೆದಿದ್ದು, ಈ ಗುಂಡಿಗಳಲ್ಲಿ ಮಳೆ ನೀರು ತುಂಬಿಕೊಂಡಿತ್ತು. ಕೆಲವೆಡೆ ಕೆಸರಿನ ರಾಡಿಯಾಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಯಿತು.

ಅಲ್ಲಂಪುರ, ಕೈಮರ, ಮೂಗ್ತಿಹಳ್ಳಿ ಸುತ್ತಮುತ್ತಲಿನ ಭಾಗಗಳಲ್ಲಿ ಮಳೆಯಾಗಿದೆ. ಭರಣಿ ಮಳೆ ರೈತರಲ್ಲಿ ಕೊಂಚ ಸಂತಸ ಮೂಡಿಸಿದೆ.

ಮೃತರ ಕುಟುಂಬಸ್ಥರು
ಮೃತರ ಕುಟುಂಬಸ್ಥರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT