ಮೂಡಿಗೆರೆ ತಾಲ್ಲೂಕಿನ ಮುಗ್ರಹಳ್ಳಿ, ಹಂತೂರು, ಉಗ್ಗೆಹಳ್ಳಿ, ಊರುಬಗೆ, ಫಲ್ಗುಣಿ ಭಾಗದಲ್ಲಿ ಗದ್ದೆ ನಾಟಿಗಾಗಿ ನಿರ್ಮಿಸಿದ್ದ ಸಸಿಮಡಿಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಭತ್ತದ ಗದ್ದೆಗಳು ಜಲಾವೃತವಾಗಿದ್ದು, ಎಸ್ಟೇಟ್ ಕುಂದೂರು, ಬೀಜುವಳ್ಳಿ, ಜನ್ನಾಪುರ ಭಾಗಗಳಲ್ಲಿ ಶುಂಠಿಗದ್ದೆಗೆ ನೀರು ನುಗ್ಗಿ ಹಾನಿಯಾಗಿದೆ.